ಬ್ರೇಕಿಂಗ್ ನ್ಯೂಸ್
05-10-20 01:52 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 05: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮತ್ತು ಆಸ್ತಿ - ಕಚೇರಿಗಳಿಗೆ ದಿಢೀರ್ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು 50 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ.
ಡಿಕೆಶಿಗೆ ಸಂಬಂಧಪಟ್ಟ ಕಚೇರಿ, ಆಸ್ತಿಗಳು ಇರುವಂತಹ ಕರ್ನಾಟಕ, ದೆಹಲಿ ಮತ್ತು ಮುಂಬೈನಲ್ಲಿ ಏಕಕಾಲದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ದೊಡ್ಡಆಲಹಳ್ಳಿ, ಕನಕಪುರ ಮತ್ತು ಸದಾಶಿವನಗರ ಹೀಗೆ 9 ಕಡೆ ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಡಿ.ಕೆ.ಸುರೇಶ್, ಆಪ್ತ ಸಚಿನ್ ನಾರಾಯಣ್ ಸೇರಿದಂತೆ ಹಲವರ ಮನೆ, ಕಚೇರಿಗಳಿಗೆ ದಾಳಿಯಾಗಿದೆ. ಈ ವೇಳೆ, 50 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ಇದೇ ವೇಳೆ, ಸಿಬಿಐ ಅಧಿಕಾರಿಗಳು ಬೆಂಗಳೂರಿನ ಕೇಂದ್ರದಲ್ಲಿ ಡಿಕೆಶಿ ಮತ್ತು ಆಪ್ತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಸಿಬಿಐ ಅಧಿಕಾರಿಗಳು ಡಿಕೆಶಿ ಮತ್ತು ಆಪ್ತರ ವಿರುದ್ಧ ದಾಳಿ ನಡೆಸುವ ಬಗ್ಗೆ ರಾಜ್ಯ ಸರಕಾರದ ಅನುಮತಿ ಪಡೆದಿದ್ದರು. ದಾಳಿ ವೇಳೆ, ಭದ್ರತೆ ನೀಡುವಂತೆ ಕೇಳಿಕೊಂಡಿದ್ದರು. ಎಲ್ಲದಕ್ಕೂ ತಯಾರಿ ಮಾಡಿಕೊಂಡಿದ್ದ ಸಿಬಿಐ ಅಧಿಕಾರಿಗಳು, ಬೆಳ್ಳಂಬೆಳಗ್ಗೆ 5.30ರ ವೇಳೆಗೆ ಡಿಕೆಶಿಯ ಬೆಂಗಳೂರಿನ ಮನೆ ಮೇಲೆ ದಾಳಿ ನಡೆಸಿದ್ದರು.
ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಒಂದು ವರ್ಷದ ಹಿಂದೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ಮತ್ತು ದೆಹಲಿಯಲ್ಲಿ ದಾಳಿ ನಡೆಸಿದ್ದರು. 5 ಕೋಟಿಗೂ ಹೆಚ್ಚು ನಗದನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿತ್ತು. ಆನಂತರ ಡಿಕೆಶಿ ಪರ ವಕೀಲರು ಹೆಚ್ಚುವರಿ ದಾಳಿ ನಡೆಸದಂತೆ ಕೋರ್ಟಿನಿಂದ ಸ್ಟೇ ಪಡೆದಿದ್ದರು. ಆ ಬಳಿಕ ತಣ್ಣಗಾಗಿದ್ದ ಪ್ರಕರಣ ಇದೀಗ ದಿಢೀರ್ ಆಗಿ ಮತ್ತೆ ಮೇಲೆದ್ದುಕೊಂಡಿದೆ. ಹಳೇ ಪ್ರಕರಣ ಸಂಬಂಧಿಸಿಯೇ ಮತ್ತೆ ದಾಳಿ ನಡೆಸುತ್ತಿದ್ದಾರೆಯೇ ಅಥವಾ ಹೊಸ ಪ್ರಕರಣ ಏನಾದ್ರೂ ಇದೆಯೇ ಅನ್ನೋದು ತಿಳಿದುಬಂದಿಲ್ಲ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm