ಬ್ರೇಕಿಂಗ್ ನ್ಯೂಸ್
05-10-20 01:52 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 05: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮತ್ತು ಆಸ್ತಿ - ಕಚೇರಿಗಳಿಗೆ ದಿಢೀರ್ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು 50 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ.
ಡಿಕೆಶಿಗೆ ಸಂಬಂಧಪಟ್ಟ ಕಚೇರಿ, ಆಸ್ತಿಗಳು ಇರುವಂತಹ ಕರ್ನಾಟಕ, ದೆಹಲಿ ಮತ್ತು ಮುಂಬೈನಲ್ಲಿ ಏಕಕಾಲದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ದೊಡ್ಡಆಲಹಳ್ಳಿ, ಕನಕಪುರ ಮತ್ತು ಸದಾಶಿವನಗರ ಹೀಗೆ 9 ಕಡೆ ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಡಿ.ಕೆ.ಸುರೇಶ್, ಆಪ್ತ ಸಚಿನ್ ನಾರಾಯಣ್ ಸೇರಿದಂತೆ ಹಲವರ ಮನೆ, ಕಚೇರಿಗಳಿಗೆ ದಾಳಿಯಾಗಿದೆ. ಈ ವೇಳೆ, 50 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ಇದೇ ವೇಳೆ, ಸಿಬಿಐ ಅಧಿಕಾರಿಗಳು ಬೆಂಗಳೂರಿನ ಕೇಂದ್ರದಲ್ಲಿ ಡಿಕೆಶಿ ಮತ್ತು ಆಪ್ತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಸಿಬಿಐ ಅಧಿಕಾರಿಗಳು ಡಿಕೆಶಿ ಮತ್ತು ಆಪ್ತರ ವಿರುದ್ಧ ದಾಳಿ ನಡೆಸುವ ಬಗ್ಗೆ ರಾಜ್ಯ ಸರಕಾರದ ಅನುಮತಿ ಪಡೆದಿದ್ದರು. ದಾಳಿ ವೇಳೆ, ಭದ್ರತೆ ನೀಡುವಂತೆ ಕೇಳಿಕೊಂಡಿದ್ದರು. ಎಲ್ಲದಕ್ಕೂ ತಯಾರಿ ಮಾಡಿಕೊಂಡಿದ್ದ ಸಿಬಿಐ ಅಧಿಕಾರಿಗಳು, ಬೆಳ್ಳಂಬೆಳಗ್ಗೆ 5.30ರ ವೇಳೆಗೆ ಡಿಕೆಶಿಯ ಬೆಂಗಳೂರಿನ ಮನೆ ಮೇಲೆ ದಾಳಿ ನಡೆಸಿದ್ದರು.
ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಒಂದು ವರ್ಷದ ಹಿಂದೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ಮತ್ತು ದೆಹಲಿಯಲ್ಲಿ ದಾಳಿ ನಡೆಸಿದ್ದರು. 5 ಕೋಟಿಗೂ ಹೆಚ್ಚು ನಗದನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿತ್ತು. ಆನಂತರ ಡಿಕೆಶಿ ಪರ ವಕೀಲರು ಹೆಚ್ಚುವರಿ ದಾಳಿ ನಡೆಸದಂತೆ ಕೋರ್ಟಿನಿಂದ ಸ್ಟೇ ಪಡೆದಿದ್ದರು. ಆ ಬಳಿಕ ತಣ್ಣಗಾಗಿದ್ದ ಪ್ರಕರಣ ಇದೀಗ ದಿಢೀರ್ ಆಗಿ ಮತ್ತೆ ಮೇಲೆದ್ದುಕೊಂಡಿದೆ. ಹಳೇ ಪ್ರಕರಣ ಸಂಬಂಧಿಸಿಯೇ ಮತ್ತೆ ದಾಳಿ ನಡೆಸುತ್ತಿದ್ದಾರೆಯೇ ಅಥವಾ ಹೊಸ ಪ್ರಕರಣ ಏನಾದ್ರೂ ಇದೆಯೇ ಅನ್ನೋದು ತಿಳಿದುಬಂದಿಲ್ಲ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm