ಬ್ರೇಕಿಂಗ್ ನ್ಯೂಸ್
18-08-22 10:34 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18: ಹಿಜಾಬ್ ವಿವಾದದ ಬಳಿಕ ಶಾಲೆ, ಕಾಲೇಜಿನಲ್ಲಿ ಮತೀಯ ದ್ವೇಷದ ವಾತಾವರಣ ಕಿಡಿ ಹೊತ್ತಿಕೊಳ್ಳುವಂತಾಗಿದೆ. ಇದೀಗ ಗಣೇಶನ ಹಬ್ಬ ಹತ್ತಿರ ಬರುತ್ತಿದ್ದಂತೆ, ವಕ್ಫ್ ಬೋರ್ಡ್ ಸದಸ್ಯರು ಸರಕಾರಕ್ಕೆ ಹೊಸ ಅಹವಾಲು ಮುಂದಿಟ್ಟಿದ್ದಾರೆ. ಶಾಲೆಗಳಲ್ಲಿ ಗಣೇಶನ ಹಬ್ಬಕ್ಕೆ ಅವಕಾಶ ಕೊಟ್ಟರೆ, ಈದ್ ಮಿಲಾದ್ ನಡೆಸುವುದಕ್ಕೂ ಅವಕಾಶ ನೀಡಬೇಕು ಎಂದು ಶಿಕ್ಷಣ ಸಚಿವರಿಗೆ ಮನವಿ ನೀಡಿದ್ದಾರೆ.
ಈದ್ ಮಿಲಾದ್ ಹಬ್ಬವನ್ನೂ ಶಾಲೆಗಳಲ್ಲಿ ಆಚರಿಸಲು ಮತ್ತು ನಮಾಜ್ ನಡೆಸುವುದಕ್ಕೆ ಅವಕಾಶ ನೀಡಬೇಕು ಎಂದು ವಕ್ಫ್ ಮಂಡಳಿ ಸದಸ್ಯರು ಅಹವಾಲು ಮುಂದಿಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್, ಯಾವುದೇ ಧಾರ್ಮಿಕ ಆಚರಣೆಗೂ ಶಾಲೆಗಳಲ್ಲಿ ಅವಕಾಶ ಇಲ್ಲ ಎಂದಿದ್ದಾರೆ. ಗಣೇಶನ ಹಬ್ಬ ನಡೆಸುವುದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಗಣೇಶನ ಹಬ್ಬವನ್ನು ದೇಶಕ್ಕೆ ಸ್ವಾತಂತ್ರ್ಯ ಸಿಗುವುದಕ್ಕೂ ಮೊದಲೇ ಶಾಲೆಗಳಲ್ಲಿ ಆಚರಿಸುತ್ತಾ ಬರಲಾಗಿತ್ತು. ಕೆಲವು ಶಾಲೆಗಳಲ್ಲಿ ಗಣೇಶನ ಮೂರ್ತಿ ಇಟ್ಟು ಪೂಜಿಸುತ್ತಿದ್ದರು. ನಮ್ಮ ಸರಕಾರ ಬಂದ ಬಳಿಕ ಗಣೇಶನ ಹಬ್ಬ ಆಚರಿಸಿದ್ದಲ್ಲ ಎಂದು ಹೇಳಿದ್ದಾರೆ.
ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಹದಿ, ಶಾಲೆಗಳಲ್ಲಿ ಶುಕ್ರವಾರದ ನಮಾಜ್ ಮಾಡುವುದಕ್ಕೆ ಪ್ರತ್ಯೇಕ ಕೊಠಡಿ ಮಾಡಿಕೊಡಬೇಕು ಎಂಬ ಅಹವಾಲನ್ನೂ ಸರಕಾರದ ಮುಂದಿಟ್ಟಿದ್ದಾರೆ. ಶಾಲೆಗಳಲ್ಲಿ ಎಲ್ಲ ಮತ, ಧರ್ಮದವರೂ ಇದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕೊಡಬೇಕು. ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯ ಅನ್ನುವಂತಾಗಬಾರದು. ಅವರಿಗೆ ಅನುಮತಿ ನೀಡಿದರೆ, ನಮಗೂ ನಮಾಜ್ ಮಾಡುವುದಕ್ಕೆ ಅವಕಾಶ ನೀಡಬೇಕು ಎಂದು ಶಾಫಿ ಹೇಳಿದ್ದಾರೆ.
ಹಿಜಾಬ್ ವಿವಾದ ಸಂದರ್ಭದಲ್ಲೂ ಈ ಬಗ್ಗೆ ನಾವು ಹೇಳಿದ್ದೆವು. ಒಂದು ಸಮುದಾಯವನ್ನು ಗುರಿ ಮಾಡಿಕೊಂಡು ಇಂತಹ ಕಾನೂನು ತರುತ್ತಿದ್ದಾರೆಂದು. ಈಗಲೂ ಅದನ್ನೇ ಹೇಳುತ್ತೇವೆ. ಗಣೇಶನ ಹಬ್ಬ ಆಚರಿಸುವುದಾದರೆ, ನಮಗೆ ನಮಾಜ್ ಮಾಡುವುದಕ್ಕೆ ಪ್ರತ್ಯೇಕ ಕೊಠಡಿ ಕೊಡಬೇಕೆಂದು ಕೇಳುತ್ತೇವೆ ಎಂದಿದ್ದಾರೆ.
On Wednesday, Nagesh's statement about Ganesha being worshipped in schools and colleges went viral on social media. The minister said at a press conference in Bengaluru, “We have given the freedom to schools and colleges to place (Ganesha) as they were practising earlier. It’s a practice of uniting society.”
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm