ಬ್ರೇಕಿಂಗ್ ನ್ಯೂಸ್
19-08-22 02:32 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 19: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ (20), ಸಚಿನ್ ವಿಕಾಸ ಕಾಳೆ (21), ವಿಕಾಸ ಲಕ್ಷ್ಮಣ ಢಾಣೆ (20) ಬಂಧಿತರು. ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಇತರೆ ಮೂವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸುತ್ತಿದ್ದ ಮಚ್ಚು, ಕುಡಗೋಲು, ಬಡಿಗೆ, ವೈರ್ ಪೈಪ್, ಮೊಬೈಲ್, ಖಾರದ ಪುಡಿ, ಮೂರು ಬೈಕ್ ಸೇರಿದಂತೆ 5.13 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಇಟ್ಟಂಗಿಹಾಳ ಕ್ರಾಸ್ ಹತ್ತಿರ ಆ.8 ರಂದು ಹಾಗೂ ಆ.12 ಹಂಚಿನಾಳ ತಾಂಡಾ ಹತ್ತಿರ ಮೂರು ಬೈಕಗಳ ಮೇಲೆ ಬಂದಿದ್ದ ಆರೇಳು ಜನರ ತಂಡ, ಮಾರಕಾಸ್ತ್ರಗಳಿಂದ ಬೆದರಿಸಿ, ಹಣ, ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ದೋಚಿದ ಬಗ್ಗೆ ದೂರುಗಳು ದಾಖಲಾಗಿದ್ದವು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಆನಂದಕುಮಾರ, ಡಿಎಸ್ಪಿ ಸಿದ್ದೇಶ್ವರ ಹಾಗೂ ಗ್ರಾಮೀಣ ವಲಯ ಸಿಪಿಐ ಸಂಗಮೇಶ ಪಾಲಭಾವಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.
ಆರೋಪಿಗಳು ಮಧ್ಯರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡು ದೃಶ್ಯಗಳು ಸಿ.ಸಿ. ಕೆಮೆರಾದಲ್ಲಿ ಸೆರೆಯಾಗಿತ್ತು. ಶುಕ್ರವಾರ ಏಳು ಆರೋಪಿಗಳು ಸಂಶಯಾಸ್ಪದ ರೀತಿಯಲ್ಲಿ ಓಡಾತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿರುವ ಎಸ್ಪಿ ಆನಂದಕುಮಾರ ನಗದು ಬಹುಮಾನ ಘೋಷಿಸಿದ್ದಾರೆ.
Seven of Dacoity gang from Maharashtra arrested by police in Vijayapura.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm