ಬ್ರೇಕಿಂಗ್ ನ್ಯೂಸ್
21-08-22 02:35 pm Bangalore Correspondent ಕರ್ನಾಟಕ
ಬೆಂಗಳೂರು,ಆಗಸ್ಟ್ 21: ಕೋವಿಡ್ ರೋಗಿಗಳಿಂದ ಶುಲ್ಕ ಪಡೆಯುವುದರ ಜೊತೆಗೆ, ಸರ್ಕಾರದಿಂದಲೂ ಹಣ ಪಡೆದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ವಹಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, 577 ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಿಸಿದ್ದಾರೆ.
ಹಾಗೆಯೇ, 403 ರೋಗಿಗಳ ಕುಟುಂಬಗಳಿಗೆ 1,58,22,359 ರೂ. ಹಣವನ್ನು ಹಿಂದಿರುಗಿಸಿ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ್ದಾರೆ.ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ, ರೆಫರಲ್ ಆಧಾರದಲ್ಲಿ ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಹಿಂದೆಯೇ ಕ್ರಮ ವಹಿಸಲಾಗಿತ್ತು. ಕೋವಿಡ್ ರೋಗಿಗಳ ಕುಟುಂಬಕ್ಕೆ ನೆರವಾಗುವ ಸದುದ್ದೇಶದಿಂದ ಸರ್ಕಾರ ಈ ಪ್ರಯೋಜನವನ್ನು ನೀಡುತ್ತಿದೆ. ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನಿಂದ ಭರಿಸಲಾಗುತ್ತದೆ. ಆದರೆ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ವಸೂಲಿ ಮಾಡುವುದರ ಜೊತೆಗೆ, ಟ್ರಸ್ಟ್ನಿಂದಲೂ ಹಣ ಪಡೆದುಕೊಂಡಿವೆ.

ಈ ಕುರಿತು ದೂರುಗಳು ಬಂದಾಗ, ತಕ್ಷಣ ಕ್ರಮ ವಹಿಸಿದ ಸಚಿವ ಡಾ.ಕೆ.ಸುಧಾಕರ್, ಪರಿಶೀಲನೆ ನಡೆಸಿ ನೊಟೀಸ್ ಜಾರಿ ಮಾಡುವಂತೆ ಸೂಚನೆ ನೀಡಿದ್ದರು. ಅದರಂತೆ, ಈವರೆಗೆ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಒಟ್ಟು 18.87 ಕೋಟಿ ರೂ. ಹಣವನ್ನು ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ ಪಡೆದಿರುವುದು ತಿಳಿದುಬಂದಿದೆ. ಈ ಪೈಕಿ ಈಗಾಗಲೇ 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಲಾಗಿದೆ. ಕೆಲ ಪ್ರಕರಣಗಳಲ್ಲಿ ಹೆಚ್ಚಿನ ಪರಿಶೀಲನೆಗಾಗಿ ದೂರುಗಳನ್ನು ಜಿಲ್ಲಾ ಮಟ್ಟದ ಕುಂದು ಕೊರತೆ ಸಮಿತಿಗೆ ವರ್ಗಾಯಿಸಲಾಗಿದೆ.
ಚಿಕಿತ್ಸಾ ವೆಚ್ಚ ಭರಿಸಿದ ಸರ್ಕಾರ:
ಕೋವಿಡ್ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗಿದೆ. ಮೊದಲನೇ ಅಲೆಯಲ್ಲಿ, 2020 ರ ಮಾರ್ಚ್ನಿಂದ 2021 ರ ಮಾರ್ಚ್ವರೆಗೆ 391.26 ಕೋಟಿ ರೂ., ಎರಡನೇ ಅಲೆಯಲ್ಲಿ, 2021ರ ಏಪ್ರಿಲ್ನಿಂದ ಡಿಸೆಂಬರ್ವರೆಗೆ 376.76 ಕೋಟಿ ರೂ. ಹಾಗೂ ಮೂರನೇ ಅಲೆಯ ವೇಳೆ, 2022 ರ ಜನವರಿಯಿಂದ ಮಾರ್ಚ್ವರೆಗೆ 11.80 ಕೋಟಿ ರೂ. ಪಾವತಿಸಲಾಗಿದೆ.
ಈ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೋವಿಡ್ ರೋಗಿಗಳಿಂದಲೂ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಈವರೆಗೆ 1.58 ಕೋಟಿ ರೂ.ನಷ್ಟು ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಇದು, ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ನೀಡಿರುವ ಸ್ಪಷ್ಟ ಎಚ್ಚರಿಕೆ ಎಂದು ತಿಳಿಸಿದ್ದಾರೆ.
Karnataka health department issue notice to 577 Private hospitals to refund 1.58 crore to Covid patients states health minister Dr Sudhakar.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm