ಬ್ರೇಕಿಂಗ್ ನ್ಯೂಸ್
22-08-22 12:46 pm Bangalore Correspondent ಕರ್ನಾಟಕ
ಬೆಂಗಳೂರು, ಆ.22: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ(47) ಹೃದಯಾಘಾತದಿಂದ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಗುರುಲಿಂಗಸ್ವಾಮಿ ಇಂದು ಬೆಳಗ್ಗೆ ಜಿಮ್ಗೆ ಹೊಗಿ ವರ್ಕೌಟ್ ಮಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರೆನ್ನಲಾಗಿದೆ.
ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ನಿವಾಸಿಯಾಗಿದ್ದ ಗುರಲಿಂಗಸ್ವಾಮಿ ಅವರು ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ವಿವಿಧ ಪತ್ರಿಕೆ, ಟಿವಿ ಚಾನೆಲ್ಗಳಲ್ಲಿ ಕಾರ್ಯನಿರ್ವಹಿಸಿದ್ದರು
ಸಿಎಂ ಅವರ ಮಾಧ್ಯಮ ಸಲಹೆಗಾರರಾಗಿ ಉತ್ತಮ ಜವಾಬ್ದಾರಿ ನಿರ್ವಹಣೆ ಮಾಡುತ್ತಿದ್ದ ಗುರುಲಿಂಗಸ್ವಾಮಿ ಅವರ ನಿಧನದ ದುಖ:ವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಸಚಿವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಕೂಡಾ ಸಂತಾಪ ಸೂಚಿಸಿದ್ದಾರೆ, ಮಾಧ್ಯಮ ಸಮನ್ವಯ ಅಧಿಕಾರಿ ಹಾಗೂ ಹಿರಿಯ ಪತ್ರಕರ್ತ ವಿದ್ಯುನ್ಮಾನ ಹಾಗೂ ದೈನಿಕ ಪತ್ರಿಕೆಗಳಲ್ಲಿ ವರದಿಗಾರನಾಗಿ, ಮತ್ತು ಇತರ ಅನೇಕ ಹಿರಿಯ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಗುರುಲಿಂಗ ಸ್ವಾಮಿ ಹೊಳಿಮಠ ಅವರ ನಿಧನದಿಂದ ಕರ್ನಾಟಕದ ಮಾಧ್ಯಮ ಕ್ಷೇತ್ರಕ್ಕೆ ತುಂಬಿ ಬಾರದ ಹಾನಿಯಾಗಿದೆ. ದಯಾಘನನಾದ ಭಗವಂತನು ಚಿರಶಾಂತಿಯನೀಯಲಿ ಮತ್ತು ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸೈರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ.
ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.
ಅಕಾಲಿಕ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ. ಅತ್ಯಂತ ಕ್ರಿಯಾಶೀಲರಾಗಿ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರು, ಸರಳತೆ ಸಜ್ಜನಿಕೆಯ ವ್ಯಕ್ತಿತ್ವದವರು ಹಾಗೂ ಅತ್ಯುತ್ತಮ ಪತ್ರಕರ್ತರಾಗಿದ್ದರು. ಗುರುಲಿಂಗಸ್ವಾಮಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಮತ್ತು ಹಿತೈಷಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Gurulingaswamy, media coordinator of chief minister (CM) Basavaraj Bommai died after suffering a chest pain while working out in the gym on Monday August 22 morning. Gurulinagaswmay had gone to gym for work out. He felt pain in his chest and was rushed to hospital. However, he succumbed on the way. The hospital authorities at Unity Life hospital declared him brought dead.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm