ಬ್ರೇಕಿಂಗ್ ನ್ಯೂಸ್
23-08-22 01:11 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 23 : ಕೊಡಗಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧಗೊಳಿಸುತ್ತಿದ್ದಂತೆ ಜಿಲ್ಲಾಡಳಿತ ಎಲರ್ಟ್ ಆಗಿದೆ. ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27ರ ವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಆ.24 ರ ಬೆಳಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಹೇರಲಾಗಿದೆ. ಸೆಕ್ಷನ್ ಇರುವುದರಿಂದ ಈ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ, ಪ್ರತಿಭಟನೆ ನಡೆಸುವಂತಿಲ್ಲ. ಘೋಷಣೆ ಕೂಗುವಂತಿಲ್ಲ. ಹೆಚ್ಚು ಜನರು ಸೇರುವಂತಿಲ್ಲ, ವಿಜಯೋತ್ಸವ ಮಾಡುವಂತಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ ಆದೇಶ ಮಾಡಿದ್ದಾರೆ.

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಆ.26 ರಂದು ಕಾಂಗ್ರೆಸ್ ಮಡಿಕೇರಿ ಚಲೋ ಹಮ್ಮಿಕೊಂಡಿದ್ದರೆ, ಅದೇ ದಿನ ಬಿಜೆಪಿಯಿಂದಲೂ ಜನಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಎರಡೂ ಕಡೆಯಿಂದಲೂ ಲಕ್ಷಕ್ಕೂ ಹೆಚ್ಚು ಜನ ಸೇರಿಸುವ ಬಗ್ಗೆ ನಾಯಕರು ಹೇಳಿಕೊಂಡಿದ್ದರು. ಕಾಂಗ್ರೆಸ್ ಆಸುಪಾಸಿನ ಜಿಲ್ಲೆಗಳಿಂದ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಪ್ಲಾನ್ ಹಾಕಿತ್ತು. ಆಗಸ್ಟ್ 26ರಂದು ಎರಡು ರಾಷ್ಟ್ರೀಯ ಪಕ್ಷಗಳ ಶಕ್ತಿ ಪ್ರದರ್ಶನದ ಕಾರಣದಿಂದಾಗಿ ಮತ್ತೊಂದು ರಣರಂಗ ಆಗುವ ಎಲ್ಲ ಸಾಧ್ಯತೆಗಳಿದ್ದವು.
ಇದನ್ನು ಮನಗಂಡ ಜಿಲ್ಲಾಧಿಕಾರಿ, ಕೊಡಗು ಮತೀಯ ಸೂಕ್ಷ್ಮ ಪ್ರದೇಶವಾದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ, ಆ.24ರ ಬೆಳಗ್ಗೆ 6 ಗಂಟೆಯಿಂದ 27ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟವನ್ನೂ ನಿಷೇಧ ಮಾಡಲಾಗಿದೆ.
Section 144 has been imposed in Karnataka's Kodagu district starting 6 am tomorrow (August 24) and will go on till 6 pm on August 27. The move comes ahead of a Congress protest in the area and also a BJP event named 'Jan Jagarti Sammelan', both of which will take place on August 26.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm