ಬ್ರೇಕಿಂಗ್ ನ್ಯೂಸ್
06-10-20 10:28 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಮಾಜಿ ಡಾನ್, ಇತ್ತೀಚೆಗಷ್ಟೇ ನಿಧನರಾಗಿರುವ ಬಿಡದಿಯ ಮುತ್ತಪ್ಪ ರೈ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಏಳು ಕಾರುಗಳಲ್ಲಿ ಆಗಮಿಸಿರುವ ಸಿಸಿಬಿ ಅಧಿಕಾರಿಗಳು, ರಾಮನಗರದ ಬಿಡದಿ ಬಳಿ ಇರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದೇ ಬೆಳಗ್ಗೆ 6 ಗಂಟೆ ವೇಳೆಗೆ ಸಿಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ್ದರು. ಈ ವೇಳೆ, ನಿವಾಸದ ಹೊರಗೆ ಕೇವಲ ಕೆಲಸಗಾರರು ಅಷ್ಟೇ ಇದ್ದರು. ನಾವು ಪೊಲೀಸರು, ಯಾರನ್ನು ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಮನೆ ಒಳಗೆ ಹೋಗಿರುವ ಅಧಿಕಾರಿಗಳು, ಸರ್ಚ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಬಂಧಿತನಾದ ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಮೇರೆಗೆ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ. ಇದಕ್ಕೂ ಮುನ್ನ ರಿಕ್ಕಿ ರೈಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು ಎನ್ನಲಾಗುತ್ತಿದೆ.
ಮನೆಯಲ್ಲಿದ್ದ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಜೊತೆಗೆ ರಿಕ್ಕಿ ರೈ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಆದಿತ್ಯ ಆಳ್ವಾ ಎಸ್ಕೇಪ್ ಆಗಲು ರಿಕ್ಕಿ ರೈ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ.
ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಡ್ರಗ್ಸ್ ಕೇಸ್ನಲ್ಲಿ ಮುತ್ತಪ್ಪ ರೈ ಪುತ್ರನನ್ನು ಫಿಕ್ಸ್ ಮಾಡುತ್ತಾರೆಯೇ ಅಥವಾ ಮನೆಯ ಒಳಗೆ ಡ್ರಗ್ ಪತ್ತೆಯಾಗಿದೆಯೇ ಅನ್ನೋದು ಗೊತ್ತಾಗಿಲ್ಲ. ಡ್ರಗ್ ಪೆಡ್ಲರ್ ಮುತ್ತಪ್ಪ ರೈ ನಿವಾಸಕ್ಕೆ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯಿಬಿಟ್ಟಿದ್ದು ಅದೇ ವಿಚಾರದಲ್ಲಿ ಪೊಲೀಸರು ರೈಗೆ ಸೇರಿದ ಬಿಡದಿಯ ತೋಟದ ಮನೆ ಮತ್ತು ಬೆಂಗಳೂರಿನ ವಯ್ಯಾಲಿಕಾವಲ್ ಮನೆಯನ್ನು ಸರ್ಚ್ ನಡೆಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm