ಬ್ರೇಕಿಂಗ್ ನ್ಯೂಸ್
06-10-20 10:28 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಮಾಜಿ ಡಾನ್, ಇತ್ತೀಚೆಗಷ್ಟೇ ನಿಧನರಾಗಿರುವ ಬಿಡದಿಯ ಮುತ್ತಪ್ಪ ರೈ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಏಳು ಕಾರುಗಳಲ್ಲಿ ಆಗಮಿಸಿರುವ ಸಿಸಿಬಿ ಅಧಿಕಾರಿಗಳು, ರಾಮನಗರದ ಬಿಡದಿ ಬಳಿ ಇರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದೇ ಬೆಳಗ್ಗೆ 6 ಗಂಟೆ ವೇಳೆಗೆ ಸಿಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ್ದರು. ಈ ವೇಳೆ, ನಿವಾಸದ ಹೊರಗೆ ಕೇವಲ ಕೆಲಸಗಾರರು ಅಷ್ಟೇ ಇದ್ದರು. ನಾವು ಪೊಲೀಸರು, ಯಾರನ್ನು ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಮನೆ ಒಳಗೆ ಹೋಗಿರುವ ಅಧಿಕಾರಿಗಳು, ಸರ್ಚ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಬಂಧಿತನಾದ ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಮೇರೆಗೆ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ. ಇದಕ್ಕೂ ಮುನ್ನ ರಿಕ್ಕಿ ರೈಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು ಎನ್ನಲಾಗುತ್ತಿದೆ.
ಮನೆಯಲ್ಲಿದ್ದ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಜೊತೆಗೆ ರಿಕ್ಕಿ ರೈ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಆದಿತ್ಯ ಆಳ್ವಾ ಎಸ್ಕೇಪ್ ಆಗಲು ರಿಕ್ಕಿ ರೈ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ.
ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಡ್ರಗ್ಸ್ ಕೇಸ್ನಲ್ಲಿ ಮುತ್ತಪ್ಪ ರೈ ಪುತ್ರನನ್ನು ಫಿಕ್ಸ್ ಮಾಡುತ್ತಾರೆಯೇ ಅಥವಾ ಮನೆಯ ಒಳಗೆ ಡ್ರಗ್ ಪತ್ತೆಯಾಗಿದೆಯೇ ಅನ್ನೋದು ಗೊತ್ತಾಗಿಲ್ಲ. ಡ್ರಗ್ ಪೆಡ್ಲರ್ ಮುತ್ತಪ್ಪ ರೈ ನಿವಾಸಕ್ಕೆ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯಿಬಿಟ್ಟಿದ್ದು ಅದೇ ವಿಚಾರದಲ್ಲಿ ಪೊಲೀಸರು ರೈಗೆ ಸೇರಿದ ಬಿಡದಿಯ ತೋಟದ ಮನೆ ಮತ್ತು ಬೆಂಗಳೂರಿನ ವಯ್ಯಾಲಿಕಾವಲ್ ಮನೆಯನ್ನು ಸರ್ಚ್ ನಡೆಸಿದ್ದಾರೆ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm