ಬ್ರೇಕಿಂಗ್ ನ್ಯೂಸ್
24-08-22 01:43 pm Bangalore Correspondent ಕರ್ನಾಟಕ
ಬೆಂಗಳೂರು, ಆ 23 : ಕೊಡಗಿನಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಅಲ್ಲಿನ ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದು, ಪ್ರಕೃತಿ ಸೌಂದರ್ಯದ ಕರ್ನಾಟಕದ ಕಾಶ್ಮೀರವನ್ನು ಜಮ್ಮು ಮತ್ತು ಕಾಶ್ಮೀರವನ್ನಾಗಿ ಮಾಡಲು ಹೊರಟಿವೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕೊಡಗು ಜಿಲ್ಲೆಯ ಮುಖಂಡರ ಜೊತೆ ಪಕ್ಷ ಸಂಘಟನೆ ಕುರಿತು ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು " ಕೊಡಗಿನಲ್ಲಿ ಶಾಂತಿ ಕಾಪಾಡಲು ನಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ. ಜತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದಿದ್ದೇನೆ. ಸರಕಾರ ಜಾರಿ ಮಾಡಿರುವ ನಿಷೇಧಾಜ್ಞೆ ತೆರವಾದ ನಂತರ ಮಡಿಕೇರಿಯಲ್ಲಿ ಸರ್ವಜನಾಂಗದ ಶಾಂತಿಯ ತೋಟ ಸಮಾವೇಶ ಹಮ್ಮಿಕೊಳ್ಳಲಾಗುವುದು " ಎಂದು ತಿಳಿಸಿದರು.

ಕರಾವಳಿಯ ರೀತಿಯಲ್ಲೇ ಕೊಡಗಿನಲ್ಲಿಯೂ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಆಗುತ್ತಿದೆ. ಇದಕ್ಕೆ ಪ್ರೋತ್ಸಾಹ ಕೊಡಬೇಡಿ ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ. ಸೌಹಾರ್ದಯುತ ನಾಡಿನ ಜನತೆಗೆ ಜಾಗೃತಿ ಮೂಡಿಸಬೇಕು. ಜನ ಶಾಂತಿಯಿಂದ ಬದುಕಲು ಕಾಪಾಡಬೇಕು. ಕೊಡಗಿನಲ್ಲಿ 144 ಸೆಕ್ಷನ್ ಮುಗಿದ ನಂತರ ನಾನು ಮತ್ತು ನಮ್ಮ ಪಕ್ಷದ ಅಧ್ಯಕ್ಷರಾದ ಸಿಎಂ ಇಬ್ರಾಹಿಂ ಸೇರಿ ಕೊಡಗಿಗೆ ಹೋಗುತ್ತೇವೆ. ಶಾಂತಿ ಸಭೆ ನಡೆಸುತ್ತಿವೆ ಎಂದರು.
ಕೊಡಗಿನಲ್ಲಿ ಇತಿಹಾಸ ಕೆದಕಿ ಕಚ್ಚಾಡುವುದು ಬೇಡ. ಹಿಂಸೆ ಯಾರಿಗೂ ಒಳ್ಳೆಯದಲ್ಲ. ದೇಶಕ್ಕೆ ಮಹಾವೀರರನ್ನು ಕೊಟ್ಟ ನೆಲದಲ್ಲಿ ಕ್ಷುಲ್ಲಕ ವಿಷಯಗಳ ವಿಜೃಂಭಣೆ ನಡೆಯುತ್ತಿದೆ. ಕಾಂಗ್ರೆಸ್, ಬಿಜೆಪಿ ಪಕ್ಷಗಳು ರಾಜಕೀಯಕ್ಕಾಗಿ ಇಂತಹ ಒಡಕು ಮೂಡಿಸುತ್ತಿವೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಕೋಮುದಳ್ಳುರಿಗೆ ತಳ್ಳುವ ಕೆಲಸ
ಕೊಡಗು ಪ್ರತಿ ವರ್ಷ ಮಳೆ, ನೆರೆಯಿಂದ ಸಂಕಷ್ಟ ಅನುಭವಿಸುತ್ತಿದೆ. ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಹೋಂ ಸ್ಟೇಗಳು ಖಾಲಿ ಬಿದ್ದಿವೆ. ಜನರ ಬದುಕು ಕಷ್ಟದಲ್ಲಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವುದು ಸರಕಾರದ ಕರ್ತವ್ಯ. ಆದರೆ, ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಕೇವಲ ಕೊಡಗನ್ನು ಕೋಮುದಳ್ಳುರಿಗೆ ತಳ್ಳುವ ಕೆಲಸ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಕಿಡಿ ಕಾರಿದರು.

ಕಾಂಗ್ರೆಸ್ಗೆ ಅಧಿಕಾರ ಪಡೆಯುವ ಯೋಚನೆ
ಕಾಂಗ್ರೆಸ್ ಬಳ್ಳಾರಿ ಪಾದಯಾತ್ರೆಯಂತೆ ಇಲ್ಲಿ ಪಾದಯಾತ್ರೆ ನಡೆಸಿ ಕಾಂಗ್ರೆಸ್ ಅಧಿಕಾರ ಹಿಡಿಯುವ ಯೋಚನೆಯಲ್ಲಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ದಂಗೆ ಎಬ್ಬಿಸುವ ಭ್ರಮೆಯಲ್ಲಿ ಇದ್ದಾರೆ ಎಂದು ವ್ಯಂಗ್ಯವಾಡಿದ ಎಚ್ಡಿಕೆ, ಇದಕ್ಕೆ ಪ್ರತಿಯಾಗಿ ಬಿಜೆಪಿಯವರು ಜನಾಂದೋಲನ ಎನ್ನುತ್ತಿದ್ದಾರೆ. ಸದ್ಯ 144 ಸೆಕ್ಷನ್ ಜಾರಿಯಲ್ಲಿದೆ. ಆದರೆ, ಕಾಂಗ್ರೆಸ್ ಅಶಾಂತಿ ಮೂಡಿಸಿ, ವಾತವರಣ ಕಲುಷಿತಗೊಳಿಸುವ ಹುನ್ನಾರದ ಬಗ್ಗೆ ನಾವು ಜನಜಾಗೃತಿ ಮೂಡಿಸಲು ಹೇಳಿದ್ದೇವೆ. ಕೊಡಗಿನ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಎರಡೂ ಪಕ್ಷಗಳು ಮಾಡುತ್ತಿವೆ. ಈ ಬಗ್ಗೆ ಜನಜಾಗೃತಿ ಮೂಡಿಸಿ ಸಂಘಟನೆ ಮಾಡಲು ನಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ ಎಂದರು.
Congress and BJP and trying to convert Kodagu into Jammu Kashmir slams HDK.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm