ಬ್ರೇಕಿಂಗ್ ನ್ಯೂಸ್
24-08-22 08:34 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಚುನಾವಣೆಗೆ ಕೆಲವೇ ತಿಂಗಳಿರುವಾಗ ಪಂಚಮಸಾಲಿ ಲಿಂಗಾಯತರು ಮೀಸಲಾತಿ ಆಗ್ರಹಿಸಿ ಪ್ರತಿಭಟನೆಗಿಳಿದಿರುವುದು ಆಡಳಿತಾರೂಢ ಬಿಜೆಪಿಯನ್ನು ಅಡಕತ್ತರಿಯಲ್ಲಿ ಸಿಲುಕಿಸಿದೆ. ಮೀಸಲಾತಿ ಬಗ್ಗೆ ನಿರ್ಧಾರ ಪ್ರಕಟಿಸದೇ ಇದ್ದರೆ, ಸೆಪ್ಟಂಬರ್ 26ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲೇ ಬೃಹತ್ ಪ್ರತಿಭಟನೆ ನಡೆಸುವುದಾಗಿ ಲಿಂಗಾಯತ ಸಮಾಜದ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.
ಪಂಚಮಸಾಲಿ ಲಿಂಗಾಯತರ ಕೂಡಲಸಂಗಮ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಸರಕಾರಕ್ಕೆ ಬಹಿರಂಗ ಎಚ್ಚರಿಕೆ ನೀಡಿದ್ದು, ಪಂಚಮಸಾಲಿ ಸಮುದಾಯವನ್ನು 2ಎ ಮೀಸಲು ವರ್ಗಕ್ಕೆ ಸೇರಿಸದೇ ಇದ್ದರೆ ಶಿವಮೊಗ್ಗದಿಂದಲೇ ಪ್ರತಿಭಟನೆ ಆರಂಭಿಸುವುದಾಗಿ ಹೇಳಿದ್ದಾರೆ. ಲಿಂಗಾಯತರು ಮೊದಲಿನಿಂದಲೂ ಬಿಜೆಪಿಯ ಪ್ರಬಲ ಮತಬ್ಯಾಂಕ್ ಆಗಿ ಗುರುತಿಸಿಕೊಂಡಿದ್ದಾರೆ. ಆದರೆ, ಈ ಬಾರಿ ಬಿಜೆಪಿ ಸರಕಾರದ ಮುಂದೆ ತಮಗೆ ಹಿಂದುಳಿದ ವರ್ಗದ ಮೀಸಲಾತಿ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.
ಕಳೆದ ಅಕ್ಟೋಬರ್ 23ರಂದು ಬೆಂಗಳೂರಿನಲ್ಲಿ ಪಂಚಮಸಾಲಿ ಪರವಾಗಿ ಉತ್ತರ ಕರ್ನಾಟಕ ಭಾಗದ ಸ್ವಾಮೀಜಿಗಳು ಪ್ರತಿಭಟನೆ ನಡೆಸಿದ್ದರು. ಸ್ವಾಮೀಜಿಗಳನ್ನು ಬಳಿಕ ಮಾತುಕತೆ ಮೂಲಕ ಪ್ರತಿಭಟನೆ ಹಿಂಪಡೆಯುವಂತೆ ಮಾಡಲು ಬಿಜೆಪಿ ನಾಯಕರು ಯಶಸ್ವಿಯಾಗಿದ್ದರು. ಆದರೆ ಈ ಬಾರಿ ಹಾವೇರಿ ಜಿಲ್ಲೆಯಲ್ಲಿ ಮಧ್ಯ ಕರ್ನಾಟಕದ 25 ಲಕ್ಷಕ್ಕೂ ಹೆಚ್ಚು ಜನರನ್ನು ಪ್ರತಿಭಟನೆಯಲ್ಲಿ ಸೇರಿಸುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ.


ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ಬಗ್ಗೆ ಭರವಸೆ ನೀಡಿದ್ದರು. ಸಚಿವ ಮುರುಗೇಶ್ ನಿರಾಣಿಯವರು ಮುಂಚೂಣಿಯಲ್ಲಿ ನಿಂತು ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಮಠ ಕಟ್ಟುವುದಕ್ಕೂ ಬೆಂಬಲ ನೀಡಿದ್ದರು. ರಾಜ್ಯ ಸರಕಾರ ಮೀಸಲು ನೀಡುವ ಬಗ್ಗೆ ಭರವಸೆ ಕೊಟ್ಟಿದ್ದರೂ ಅದನ್ನು ಈಡೇರಿಸದೇ ಇರುವುದು ಈಗ ಪೀಕಲಾಟಕ್ಕೆ ಸಿಲುಕುವಂತಾಗಿದೆ. ನಿರಾಣಿ, ಸಿಸಿ ಪಾಟೀಲ್, ಮುಖ್ಯಮಂತ್ರಿ ಬೊಮ್ಮಾಯಿ ಸ್ವಾಮೀಜಿಯವರನ್ನು ಭೇಟಿಯಾಗಿ ಮನವೊಲಿಕೆಗೆ ಮುಂದಾಗಿದ್ದರೂ, ಪ್ರತಿಭಟನೆ ಹಿಂಪಡೆಯಲ್ಲ ಎಂದು ಸ್ವಾಮೀಜಿ ಗುಡುಗಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಲಿಂಗಾಯತರು ಮುನಿಸಿಕೊಂಡರೆ ಚುನಾವಣೆಯಲ್ಲಿ ತಮಗೆ ಲಾಭವಾದೀತು ಎನ್ನುವ ಲೆಕ್ಕಾಚಾರದಲ್ಲಿದ್ದಾರೆ. ಹಾಗಾಗಿ, ಈ ಬಗ್ಗೆ ಅಳೆದು ತೂಗಿ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ಭರವಸೆ ಕೊಟ್ಟು ಮಾತು ನಡೆಸಿಕೊಳ್ಳದೇ ಇರುವುದು ಈಗ ಪಕ್ಷಕ್ಕೇ ಮುಳುವಾಗಿ ಪರಿಣಮಿಸಿದೆ.
Panchamasali Lingayat seer all set for massive protest for the classification of the sect from 3B to 2A in the OBC list.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm