ಬ್ರೇಕಿಂಗ್ ನ್ಯೂಸ್
25-08-22 12:22 pm HK News Desk ಕರ್ನಾಟಕ
ತುಮಕೂರು, ಆಗಸ್ಟ್ 25: ಭೀಕರ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಗೇಟ್ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.
ಬೆಂಗಳೂರು ಕಡೆಗೆ ತೆರಳುತ್ತಿದ್ದ ಕ್ರೂಸರ್ ಟೆಂಪೋದಲ್ಲಿ ಸುಮಾರು 23 ಜನ ಪ್ರಯಾಣ ಮಾಡುತಿದ್ದರು ಎನ್ನಲಾಗಿದ್ದು, ಎಲ್ಲರೂ ಕೂಲಿ ಕಾರ್ಮಿಕರಾಗಿದ್ದರು. ರಾಯಚೂರು ಜಿಲ್ಲೆಯ ಮಾನ್ವಿಯಿಂದ ಬೆಂಗಳೂರು ಕಡೆ ಪ್ರಯಾಣ ಮಾಡುತಿದ್ದರು. ಮೃತಪಟ್ಟವರನ್ನು ಮಾನ್ವಿ ತಾಲೂಕಿನ ಸುಜಾತಾ (25), ಲಕ್ಷ್ಮಿ (13), ವಿನೋದ್ (3), ಕ್ರೂಸರ್ ಚಾಲಕ ಕೃಷ್ಣಪ್ಪ (25) ಎಂದು ತಿಳಿದುಬಂದಿದ್ದು, ಉಳಿದವರ ಹೆಸರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಮುಂದಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದಾರೆ.

ಟೆಂಪೋದಲ್ಲಿದ್ದ ಶಿವರಾಜು ಎಂಬವರು ಮಾತನಾಡಿ, 'ನಾನು ಡ್ರೈವರ್ ಪಕ್ಕ ಕೂತಿದ್ದೆ, ಟೆಂಪೋ ನಿಧಾನಕ್ಕೆ ಹೋಗಿತ್ತು, ಲಾರಿ ಡಿಕ್ಕಿ ಹೊಡೆದ ಮೇಲೆ ಟೆಂಪೊ ಪಲ್ಟಿ ಹೊಡೆದುಬಿಡ್ತು' ಎಂದಿದ್ದಾರೆ. ಇಪ್ಪತ್ತು ಜನರು ಟೆಂಪೋದಲ್ಲಿ ಇದ್ದರು. ಒಳಗಡೆ ಭರ್ತಿ ಆಗಿದ್ದರಿಂದ ಮತ್ತೆ ಇನ್ನಿಬ್ಬರು ಟೆಂಪೊ ಮೇಲೆ ಮಲಗಿದ್ದರು. ಟೆಂಪೊ ಮೇಲೆ ಮಲಗಿದ್ದವರಲ್ಲಿ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್ ಮಾಡಿದ್ದು, 'ಇದೊಂದು ಅತ್ಯಂತ ದುರಾದೃಷ್ಟಕರ ಘಟನೆ' ಎಂದಿದ್ದಾರೆ. ತುಮಕೂರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಮಾತನಾಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ನಿರ್ದೇಶನ ನೀಡಲಾಗಿದೆ. ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.


ಪರಿಹಾರ ಒದಗಿಸಬೇಕು ಎಂದ ಕುಮಾರಸ್ವಾಮಿ
ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಮೃತಪಟ್ಟವರು ಕೂಲಿಕಾರ್ಮಿಕರು, ಬದಕು ಕಟ್ಟಿಕೊಳ್ಳಲು ಅವರೆಲ್ಲರೂ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದರೆಂದು ತಿಳಿದು ನನಗೆ ಅತೀವ ದುಃಖವಾಗಿದೆ. ತಕ್ಷಣವೇ ಸ್ವತಃ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಖುದ್ದು ಕ್ರಮ ವಹಿಸಿ ಜೀವ ಕಳೆದುಕೊಂಡಿರುವವರ ಎಲ್ಲ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಗಾಯಾಳುಗಳಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸುತ್ತೇನೆ' ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ತಕ್ಷಣವೇ ಸ್ವತಃ ಮುಖ್ಯಮಂತ್ರಿ ಶ್ರೀ @BSBommai ಅವರೇ ಖುದ್ದು ಕ್ರಮ ವಹಿಸಿ ಜೀವ ಕಳೆದುಕೊಂಡಿರುವವರ ಎಲ್ಲ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಗಾಯಾಳುಗಳಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸುತ್ತೇನೆ.
— H D Kumaraswamy (@hd_kumaraswamy) August 25, 2022
ಗಾಯಾಳುಗಳೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. 2/2
At least nine people, including three children, died after a tempo collided with a truck on the National Highway near Sira in Karnataka’s Tumakuru district on Thursday. Around a dozen people were also reportedly injured in the incident and were shifted to hospital for treatment.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm