ಬ್ರೇಕಿಂಗ್ ನ್ಯೂಸ್
26-08-22 04:59 pm Bangalore Correspondent ಕರ್ನಾಟಕ
ಬೆಂಗಳೂರು, ಆ 26: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಅಕ್ರಮ ನಡೆದು ಸ್ವತಃ ಕೈಗಾರಿಕಾ ಸಚಿವರೇ ಜೈಲಿಗೆ ಹೋದರು. ಅದರೂ ಬಿಜೆಪಿ ಪಾಠ ಕಲಿತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದರು.
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೃಷಿ ಭೂಮಿಯನ್ನು ಸರಕಾರ ನಿರ್ದಯವಾಗಿ ಸ್ವಾಧೀನ ಮಾಡಿಕೊಳ್ಳುತ್ತಿರುವುದು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಕುಮಾರಸ್ವಾಮಿ ಮಾಧ್ಯಮಗಳ ಜತೆ ಮಾತನಾಡಿದರು.

"ಅಷ್ಟೆಲ್ಲಾ ಆದರೂ ಕೂಡ ಬಿಜೆಪಿಗೆ ಇನ್ನೂ ಬುದ್ದಿ ಬಂದಿಲ್ಲ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ. ರೈತರ ಬದುಕಿನ ಜೊತೆ ಚೆಲ್ಲಾಟ ಆಡುವುದು ಮುರುಗೇಶ್ ನಿರಾಣಿ ಮಾಡುತ್ತಿರುವ ಘನಂದಾರಿ ಕೆಲಸ. ಇವರ ದೃಷ್ಟಿಯಲ್ಲಿ ರೈತರು ಬದುಕುವ ಹಾಗೆಯೇ ಇಲ್ಲ. ಬೆಂಗಳೂರಿನಲ್ಲಿಯೂ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ" ಎಂದು ಕುಮಾರಸ್ವಾಮಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಟೀಕಾ ಪ್ರಹಾರ ನಡೆಸಿದರು.
"ಕೇವಲ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಕೈಗಾರಿಕೆ ಬರಬೇಕು ಎಂಬ ಚಿಂತನೆ ಬಿಡಿ, ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನು ಆರಂಭ ಮಾಡಬೇಕೆ ವಿನಾ ಫಲವತ್ತಾದ ಜಮೀನನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ" ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ ;
"ರಾಜ್ಯದಲ್ಲಿ ಅಕ್ರಮ, ಅನ್ಯಾಯಗಳು ಎಷ್ಟು ಮೇರೆ ಮೀರಿವೆ ಎಂದರೆ, ತಪ್ಪಿತಸ್ಥರಿಗೆ ಒಂದು ಪರಪ್ಪನ ಆಗ್ರಹಾರ ಜೈಲು ಸಾಲುವುದಿಲ್ಲ. ಈಗಿನ ಭ್ರಷ್ಟಾಚಾರ ನೋಡಿದರೆ 10-15 ಪರಪ್ಪನ ಅಗ್ರಹಾರ ಜೈಲುಗಳು ಬೇಕು. ಇಷ್ಟೆಲ್ಲಾ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಇಟ್ಟುಕೊಂಡು ಪಾಪ.. ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ. ಅಬಕಾರಿ ನೀತಿಯಲ್ಲಿ ಒಂದು ಕೋಟಿ ವರ್ಗಾವಣೆ ಆಗಿದೆ ಅಂತ ಆರೋಪ ಮಾಡಿ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ" ಎಂದು ಕುಮಾರಸ್ವಾಮಿ ಕಿಡಿಕಾರಿದರು.
Bjp has highly corrupted people, 10-15 jails aren't enough slams HDK.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm