ಬ್ರೇಕಿಂಗ್ ನ್ಯೂಸ್
26-08-22 04:59 pm Bangalore Correspondent ಕರ್ನಾಟಕ
ಬೆಂಗಳೂರು, ಆ 26: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಅಕ್ರಮ ನಡೆದು ಸ್ವತಃ ಕೈಗಾರಿಕಾ ಸಚಿವರೇ ಜೈಲಿಗೆ ಹೋದರು. ಅದರೂ ಬಿಜೆಪಿ ಪಾಠ ಕಲಿತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದರು.
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೃಷಿ ಭೂಮಿಯನ್ನು ಸರಕಾರ ನಿರ್ದಯವಾಗಿ ಸ್ವಾಧೀನ ಮಾಡಿಕೊಳ್ಳುತ್ತಿರುವುದು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಕುಮಾರಸ್ವಾಮಿ ಮಾಧ್ಯಮಗಳ ಜತೆ ಮಾತನಾಡಿದರು.

"ಅಷ್ಟೆಲ್ಲಾ ಆದರೂ ಕೂಡ ಬಿಜೆಪಿಗೆ ಇನ್ನೂ ಬುದ್ದಿ ಬಂದಿಲ್ಲ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ. ರೈತರ ಬದುಕಿನ ಜೊತೆ ಚೆಲ್ಲಾಟ ಆಡುವುದು ಮುರುಗೇಶ್ ನಿರಾಣಿ ಮಾಡುತ್ತಿರುವ ಘನಂದಾರಿ ಕೆಲಸ. ಇವರ ದೃಷ್ಟಿಯಲ್ಲಿ ರೈತರು ಬದುಕುವ ಹಾಗೆಯೇ ಇಲ್ಲ. ಬೆಂಗಳೂರಿನಲ್ಲಿಯೂ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ" ಎಂದು ಕುಮಾರಸ್ವಾಮಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಟೀಕಾ ಪ್ರಹಾರ ನಡೆಸಿದರು.
"ಕೇವಲ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಕೈಗಾರಿಕೆ ಬರಬೇಕು ಎಂಬ ಚಿಂತನೆ ಬಿಡಿ, ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನು ಆರಂಭ ಮಾಡಬೇಕೆ ವಿನಾ ಫಲವತ್ತಾದ ಜಮೀನನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ" ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ ;
"ರಾಜ್ಯದಲ್ಲಿ ಅಕ್ರಮ, ಅನ್ಯಾಯಗಳು ಎಷ್ಟು ಮೇರೆ ಮೀರಿವೆ ಎಂದರೆ, ತಪ್ಪಿತಸ್ಥರಿಗೆ ಒಂದು ಪರಪ್ಪನ ಆಗ್ರಹಾರ ಜೈಲು ಸಾಲುವುದಿಲ್ಲ. ಈಗಿನ ಭ್ರಷ್ಟಾಚಾರ ನೋಡಿದರೆ 10-15 ಪರಪ್ಪನ ಅಗ್ರಹಾರ ಜೈಲುಗಳು ಬೇಕು. ಇಷ್ಟೆಲ್ಲಾ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಇಟ್ಟುಕೊಂಡು ಪಾಪ.. ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ. ಅಬಕಾರಿ ನೀತಿಯಲ್ಲಿ ಒಂದು ಕೋಟಿ ವರ್ಗಾವಣೆ ಆಗಿದೆ ಅಂತ ಆರೋಪ ಮಾಡಿ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ" ಎಂದು ಕುಮಾರಸ್ವಾಮಿ ಕಿಡಿಕಾರಿದರು.
Bjp has highly corrupted people, 10-15 jails aren't enough slams HDK.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm