ಬ್ರೇಕಿಂಗ್ ನ್ಯೂಸ್
26-08-22 04:59 pm Bangalore Correspondent ಕರ್ನಾಟಕ
ಬೆಂಗಳೂರು, ಆ 26: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಅಕ್ರಮ ನಡೆದು ಸ್ವತಃ ಕೈಗಾರಿಕಾ ಸಚಿವರೇ ಜೈಲಿಗೆ ಹೋದರು. ಅದರೂ ಬಿಜೆಪಿ ಪಾಠ ಕಲಿತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದರು.
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೃಷಿ ಭೂಮಿಯನ್ನು ಸರಕಾರ ನಿರ್ದಯವಾಗಿ ಸ್ವಾಧೀನ ಮಾಡಿಕೊಳ್ಳುತ್ತಿರುವುದು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಕುಮಾರಸ್ವಾಮಿ ಮಾಧ್ಯಮಗಳ ಜತೆ ಮಾತನಾಡಿದರು.

"ಅಷ್ಟೆಲ್ಲಾ ಆದರೂ ಕೂಡ ಬಿಜೆಪಿಗೆ ಇನ್ನೂ ಬುದ್ದಿ ಬಂದಿಲ್ಲ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ. ರೈತರ ಬದುಕಿನ ಜೊತೆ ಚೆಲ್ಲಾಟ ಆಡುವುದು ಮುರುಗೇಶ್ ನಿರಾಣಿ ಮಾಡುತ್ತಿರುವ ಘನಂದಾರಿ ಕೆಲಸ. ಇವರ ದೃಷ್ಟಿಯಲ್ಲಿ ರೈತರು ಬದುಕುವ ಹಾಗೆಯೇ ಇಲ್ಲ. ಬೆಂಗಳೂರಿನಲ್ಲಿಯೂ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ" ಎಂದು ಕುಮಾರಸ್ವಾಮಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಟೀಕಾ ಪ್ರಹಾರ ನಡೆಸಿದರು.
"ಕೇವಲ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಕೈಗಾರಿಕೆ ಬರಬೇಕು ಎಂಬ ಚಿಂತನೆ ಬಿಡಿ, ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನು ಆರಂಭ ಮಾಡಬೇಕೆ ವಿನಾ ಫಲವತ್ತಾದ ಜಮೀನನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ" ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ ;
"ರಾಜ್ಯದಲ್ಲಿ ಅಕ್ರಮ, ಅನ್ಯಾಯಗಳು ಎಷ್ಟು ಮೇರೆ ಮೀರಿವೆ ಎಂದರೆ, ತಪ್ಪಿತಸ್ಥರಿಗೆ ಒಂದು ಪರಪ್ಪನ ಆಗ್ರಹಾರ ಜೈಲು ಸಾಲುವುದಿಲ್ಲ. ಈಗಿನ ಭ್ರಷ್ಟಾಚಾರ ನೋಡಿದರೆ 10-15 ಪರಪ್ಪನ ಅಗ್ರಹಾರ ಜೈಲುಗಳು ಬೇಕು. ಇಷ್ಟೆಲ್ಲಾ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಇಟ್ಟುಕೊಂಡು ಪಾಪ.. ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ. ಅಬಕಾರಿ ನೀತಿಯಲ್ಲಿ ಒಂದು ಕೋಟಿ ವರ್ಗಾವಣೆ ಆಗಿದೆ ಅಂತ ಆರೋಪ ಮಾಡಿ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ" ಎಂದು ಕುಮಾರಸ್ವಾಮಿ ಕಿಡಿಕಾರಿದರು.
Bjp has highly corrupted people, 10-15 jails aren't enough slams HDK.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm