ಬ್ರೇಕಿಂಗ್ ನ್ಯೂಸ್
26-08-22 08:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 26 : ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಎಸಿಬಿ ರದ್ದುಗೊಳಿಸಿ, ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಆದೇಶಿಸಿತ್ತು. ಅಲ್ಲದೆ, ಭ್ರಷ್ಟಾಚಾರ ಪ್ರಕರಣಗಳನ್ನು ಎಸಿಬಿ ಬದಲು ಲೋಕಾಯುಕ್ತವೇ ತನಿಖೆ ನಡೆಸುವಂತೆ ಆದೇಶ ಮಾಡಿತ್ತು. ಅದರಂತೆ, ಇನ್ಮುಂದೆ ಸಾರ್ವಜನಿಕರು ನೀಡುವ ಭ್ರಷ್ಟಾಚಾರ ಕುರಿತ ದೂರುಗಳನ್ನು ಲೋಕಾಯುಕ್ತ ಕಾಯ್ದೆಯಡಿ ದಾಖಲಿಸಿಕೊಳ್ಳುವಂತೆ ಲೋಕಾಯುಕ್ತ ಎಡಿಜಿಪಿ ತನ್ನ ಕೆಳಗಿನ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಲೋಕಾಯುಕ್ತ ಎಡಿಜಿಪಿ ಹೆಸರಲ್ಲಿ ಸುತ್ತೋಲೆ ಹೊರಡಿಸಲಾಗಿದ್ದು, ಹೈಕೋರ್ಟ್ ಆದೇಶ ಪಾಲನೆಗೆ ಸೂಚಿಸಿದ್ದಾರೆ. ಎಲ್ಲ ಜಿಲ್ಲೆಗಳ ಲೋಕಾಯುಕ್ತ ಎಸ್ಪಿ, ಡಿಎಸ್ಪಿ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳು, ಲೋಕಾಯುಕ್ತದಡಿ ಬರುವ 1988ರ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಂತೆ ದೂರುಗಳನ್ನು ದಾಖಲಿಸಿಕೊಳ್ಳಲು ಸೂಚಿಸಿದ್ದಾರೆ. ಇನ್ಮುಂದೆ ಸಾರ್ವಜನಿಕರಿಂದ ಯಾವುದೇ ರೀತಿಯ ಭ್ರಷ್ಟಾಚಾರ ಕುರಿತ ದೂರುಗಳನ್ನು ಇದೇ ಕಾಯ್ದೆಯಡಿ ದಾಖಲಿಸುವಂತೆ ಸೂಚಿಸಿದ್ದಾರೆ. ಈ ಮೂಲಕ ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ ನೀಡಿ ಆದೇಶ ಮಾಡಿದ್ದಾರೆ.
ಪ್ರತಿ ಜಿಲ್ಲೆಯಲ್ಲಿ ಲೋಕಾಯುಕ್ತ ವಿಭಾಗ ಇದ್ದು ಎಸಿಬಿ ರಚನೆಯಾದ ಬಳಿಕ ದಾಳಿ ನಡೆಸುವ ಮತ್ತು ಕೇಸು ದಾಖಲಿಸುವ ಅಧಿಕಾರ ಕಳಕೊಂಡಿತ್ತು. ಅದರ ಬದಲಿಗೆ ಪ್ರತ್ಯೇಕ ಭ್ರಷ್ಟಾಚಾರ ನಿಗ್ರಹ ದಳ ಅಸ್ತಿತ್ವಕ್ಕೆ ಬಂದಿತ್ತು. ರಾಜ್ಯ ಸರಕಾರದ ಮರ್ಜಿಯಲ್ಲಿ ಅಂದರೆ ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಣತಿಯಿಲ್ಲದೆ ಕೇಸು ದಾಖಲಿಸಿಕೊಳ್ಳಲು ಮತ್ತು ಹಿರಿಯ ಅಧಿಕಾರಿಗಳ ಮೇಲೆ ದಾಳಿ ನಡೆಸುವಷ್ಟು ಅಧಿಕಾರ ಇರಲಿಲ್ಲ. ಹೀಗಾಗಿ ಎಸಿಬಿ ಅನ್ನುವುದು ರಾಜ್ಯ ಸರಕಾರದ ಮರ್ಜಿಯಲ್ಲೇ ನಡೆಯಬೇಕಿತ್ತು. ಇದರಿಂದ ಐಎಎಸ್, ಐಪಿಎಸ್ ದರ್ಜೆಯ ಅಧಿಕಾರಿಗಳ ಮೇಲೆ ದಾಳಿ ನಡೆಸುವುದು ಸಾಧ್ಯವಾಗುತ್ತಿರಲಿಲ್ಲ. ದೊಡ್ಡ ತಿಮಿಂಗಿಲಗಳು ರಾಜಕಾರಣಿಗಳ ಮೂಲಕ ತಿಂದು ತೇಗಿದರೂ ಆಶ್ರಯ ಪಡೆದುಕೊಳ್ಳುತ್ತಿದ್ದರು.
ಇದೇ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರಕಾರ ಎಸಿಬಿ ರಚಿಸಿದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುದೀರ್ಘ ವಿಚಾರಣೆ, ವಾದ ಆಲಿಸಿದ ಬಳಿಕ ಎಸಿಬಿ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಪರಮಾಧಿಕಾರ ನೀಡಿತ್ತು.
Lokayukta gains back power in Karnataka, follow court order as of 1988 circular by ADGP.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm