ಬ್ರೇಕಿಂಗ್ ನ್ಯೂಸ್
27-08-22 12:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ : ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಬಿಜೆಪಿ ಶಾಸಕ ವೀರಣ್ಣ ಸಿ.ಚರಂತಿಮಠ, ಬಿಜೆಪಿ ಮುಖಂಡ ಬಸವರಾಜ ಪಾಟೀಲ ಸೇಡಂ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಡಾ.ಎಂ.ನಾಗರಾಜ್ ಅವರಿಗೂ ಬದಲಿ ನಿವೇಶನ ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದೆ.
ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಕೆ.ಎಸ್.ಜಗದೀಶ ರೆಡ್ಡಿ ಅವರ ಸಂಬಂಧಿ ರಾಮ ರೆಡ್ಡಿ, ಗೀತಾ ರೆಡ್ಡಿ ಅವರಿಗೂ 40X60 ಅಡಿ ಅಳತೆಯ ಬದಲಿ ನಿವೇಶನ ಹಂಚಲಾಗಿದೆ. ಬೆಂಗಳೂರಿನಲ್ಲಿ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣದ ಕುರಿತ ವಿವಾದವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಯೋಜನೆಗೆ ಸಂಪನ್ಮೂಲವನ್ನು ಹೇಗೆ ಕ್ರೋಡೀಕರಣ ಮಾಡಲಾಗುತ್ತದೆ ಎಂದು ಪ್ರಾಧಿಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ನಿವೇಶನಗಳನ್ನು ಮಾರಾಟ ಮಾಡಿ ಸಂಪನ್ಮೂಲ ಕ್ರೋಡೀಕರಣ ಮಾಡಲಾಗುವುದು ಎಂದು ಬಿಡಿಎ ಉತ್ತರಿಸಿತ್ತು. ಈ ವೇಳೆ, ಮರು ಸ್ವಾಧೀನ ಪಡೆದಿರುವ ಅಥವಾ ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಸಾರ್ವಜನಿಕ ಹರಾಜಿನ ಮೂಲಕ ಮಾತ್ರ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ 2021ರ ಅಕ್ಟೋಬರ್ 29ರಂದು ಆದೇಶಿಸಿತ್ತು.
ಆದರೆ, ಕೋರ್ಟ್ ಆದೇಶ ಉಲ್ಲಂಘಿಸಿ ಪ್ರಸಕ್ತ ಸರಕಾರದಲ್ಲಿ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಕಾರಣಕ್ಕೆ ಬಿಡಿಎ ಆಯುಕ್ತ ಎಂ.ಬಿ.ರಾಜೇಗೌಡ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡು ವರ್ಗಾವಣೆಗೆ ನಿರ್ದೇಶಿಸಿತ್ತು. 'ಜಿ ಕೆಟಗರಿ ನಿವೇಶನ ಹಂಚಿಕೆಯೇ ಅಕ್ರಮ. ಈ ಅಕ್ರಮದಲ್ಲಿ ಬಿಡಿಎ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಭಾಗಿಯಾಗಿದ್ದಾರೆ ಎಂದೂ ನ್ಯಾಯಪೀಠ ಹೇಳಿತ್ತು.
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ಸಂಬಂಧಿ ಹಾಗೂ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೂ ಆರ್ಎಂವಿ ಎರಡನೇ ಹಂತದಲ್ಲಿ ಬದಲಿ ನಿವೇಶನ ಹಂಚಿಕೆಗೆ ಕಡತ ಸಿದ್ಧವಾಗಿತ್ತು. ಈಗ ಸುಪ್ರೀಂ ಆದೇಶದಿಂದ ಇದಕ್ಕೆ ಕಡಿವಾಣ ಬಿದ್ದಿದೆ' ಎಂದು ಮೂಲಗಳು ತಿಳಿಸಿವೆ. ಕೆಂಪೇಗೌಡ ಬಡಾವಣೆ ಹಾಗೂ ಅರ್ಕಾವತಿ ಬಡಾವಣೆ ಬಿಟ್ಟು ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಹರಾಜಿನ ಮೂಲಕವೇ ನಿವೇಶನ ಹಂಚಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ. ಒಂದು ಪ್ರಕರಣದಲ್ಲಿ ಲೋಪ ಆಗಿದೆ. ಎಚ್ಎಸ್ಆರ್ ಬಡಾವಣೆಗಿಂತ ಮೂರು ತಿಂಗಳ ಮೊದಲು ಆರ್ಎಂವಿ ಬಡಾವಣೆ ನಿರ್ಮಾಣವಾಗಿತ್ತು. ಮುಂದೆ ಇಂತಹ ತಪ್ಪು ಘಟಿಸದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದೇನೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
Three people, including Home Minister Araga Jnanendra, who recently received alternative sites, have been asked to surrender them back to the Bangalore Development says Authority (BDA), Chairman
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm