ಬ್ರೇಕಿಂಗ್ ನ್ಯೂಸ್
27-08-22 04:43 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 27: ಮುರುಘಾ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಬಗ್ಗೆ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಮೈಸೂರಿನ ಒಡನಾಡಿ ಸಂಸ್ಥೆ ಆಗ್ರಹ ಮಾಡಿದೆ.
ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶು ಮತ್ತು ಕೌನ್ಸಿಲರ್ ಸರಸ್ವತಿ ಹೇಳಿಕೆ ನೀಡಿದ್ದು ಪ್ರೌಢಶಾಲೆಯ ಮಕ್ಕಳನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿರುವ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಜುಲೈ 24 ರಂದು ಮಕ್ಕಳು ದೌರ್ಜನ್ಯದಿಂದ ಬೇಸತ್ತು ಬೆಂಗಳೂರಿನ ಮೆಜೆಸ್ಟಿಕ್ ಗೆ ಬಂದಿದ್ದರು. ಅಲ್ಲಿ ಬಹಳಷ್ಟು ಸಮಯ ಒಂದೇ ಕಡೆ ನಿಂತಿದ್ದರಿಂದ ಆಟೋ ಚಾಲಕರೊಬ್ಬರು ಅವರನ್ನು ವಿಚಾರಿಸಿ, ಸಮೀಪದ ಕಾಟನ್ ಪೇಟೆ ಪೊಲೀಸ್ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಮಕ್ಕಳು ಯಾರನ್ನು ಭೇಟಿ ಮಾಡಿದ್ರು ಅನ್ನೋ ಮಾಹಿತಿ ನಮಗಿಲ್ಲ. ಆದರೆ ಠಾಣೆಗೆ ಹೋಗಿರೋದು ನಿಜ. ಮಕ್ಕಳು ಭಯದ ಕಾರಣಕ್ಕೆ ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಲ್ಲ.
ಸ್ವಾಮೀಜಿಯವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಾರೆ. ಕೆಟ್ಟದಾಗಿ ನಿಂದಿಸುತ್ತಾರೆ ಎಂದಷ್ಟೇ ಹೇಳಿದ್ದಾರೆ. ಠಾಣೆಯಲ್ಲಿ ಸತ್ಯ ಹೇಳಿದ್ರೆ ಸ್ವಾಮೀಜಿಯವರು ಪ್ರಭಾವಿಗಳು, ತೊಂದರೆ ಆಗಬಹುದು ಎಂಬ ಕಾರಣಕ್ಕೆ ಸತ್ಯ ಹೇಳಿಲ್ಲ. ಪೊಲೀಸರು ಸಂಯಮದಿಂದ ಅವರನ್ನು ವಿಚಾರಿಸಿದ್ದರೆ ಸತ್ಯಾಂಶ ಹೊರಬರುತ್ತಿತ್ತು. ಆದರೆ ಪೊಲೀಸರು ಅಪ್ರಾಪ್ತ ಹೆಣ್ಣು ಮಕ್ಕಳಿಂದ ಸರಿಯಾಗಿ ಮಾಹಿತಿ ಪಡೆಯದೆ ನಿರ್ಲಕ್ಷ್ಯ ಮಾಡಿದ್ದಾರೆ.
ಪೊಲೀಸರಿಂದ ನ್ಯಾಯ ಸಿಗುತ್ತೆ ಎಂಬ ಖಾತ್ರಿ ಇದ್ದಿದ್ದರೆ ಆ ಮಕ್ಕಳು ನಮ್ಮ ತನಕ ಬರುತ್ತಿರಲಿಲ್ಲ. ಹೀಗಾಗಿ ಆ ಮಕ್ಕಳು ಬೇರೊಬ್ಬರ ಸಹಾಯ ಪಡೆದು ನಮ್ಮ ಬಳಿ ಬಂದಿದ್ದಾರೆ. ನಾವು ಅವರ ಪರ ನಿಂತು ಎಫ್.ಐ.ಆರ್. ಮಾಡಿಸಿದ್ದೇವೆ. ಮಕ್ಕಳ ಮಾನಸಿಕ ಸ್ಥಿತಿ ಧೃಡವಾಗಿಯೇನೂ ಇಲ್ಲ. ತುಂಬಾ ಹೆದರಿಕೆಯಿಂದಲೇ ನಮ್ಮ ಬಳಿ ಆಗಿರುವ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದಾರೆ ಎಂದು ಕೌನ್ಸಿಲರ್ ಸರಸ್ವತಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
Murugha Matha Sri Shivamuruthy alleged of continuous Sexual harassment of hostel girls posco case filed in Chitradurga.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm