ಬ್ರೇಕಿಂಗ್ ನ್ಯೂಸ್
27-08-22 08:54 pm HK News Desk ಕರ್ನಾಟಕ
ಕಲಬುರ್ಗಿ, ಆಗಸ್ಟ್ 27 : ಅಕ್ರಮ ಪಿಎಸ್ಐ ನೇಮಕಾತಿ ಪ್ರಕರಣ ಸಂಬಂಧಿಸಿ ಒಎಂಆರ್ ಉತ್ತರ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿಸಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಹನುಮಂತ (25) ಎಂಬವರನ್ನು ಸಿಐಡಿ ಅಧಿಕಾರಿಗಳು ಕಡೆಗೂ ಶನಿವಾರ ಬಂಧಿಸಿದ್ದಾರೆ.
ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ತಿರುಗಾಡುತ್ತಿದ್ದ ರಚನಾ ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು. ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರ ಹುಡುಕಾಟ ನಡೆಸಿದ್ದರು. ಮಹಾರಾಷ್ಟ್ರ ಗಡಿಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಶನಿವಾರ ನಗರದ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.
ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದ್ದರಿಂದ ಟ್ರಾನ್ಸಿಟ್ ವಾರೆಂಟ್ ಪಡೆದ ಸಿಐಡಿ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ ಪಿಎಸ್ಐ ಅಕ್ರಮದ ಆರೋಪ ಕೇಳಿಬಂದಾಗ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ತನ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ರಚನಾ ನಾಪತ್ತೆಯಾಗಿದ್ದರು.
CID police have arrested a top ranker in the rigged PSI recruitment examination. Sources said that Rachana who had secured the top spot in the women’s quota in the exam was arrested for alleged irregularities.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm