ಬ್ರೇಕಿಂಗ್ ನ್ಯೂಸ್
27-08-22 08:54 pm HK News Desk ಕರ್ನಾಟಕ
ಕಲಬುರ್ಗಿ, ಆಗಸ್ಟ್ 27 : ಅಕ್ರಮ ಪಿಎಸ್ಐ ನೇಮಕಾತಿ ಪ್ರಕರಣ ಸಂಬಂಧಿಸಿ ಒಎಂಆರ್ ಉತ್ತರ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿಸಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಹನುಮಂತ (25) ಎಂಬವರನ್ನು ಸಿಐಡಿ ಅಧಿಕಾರಿಗಳು ಕಡೆಗೂ ಶನಿವಾರ ಬಂಧಿಸಿದ್ದಾರೆ.
ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ತಿರುಗಾಡುತ್ತಿದ್ದ ರಚನಾ ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು. ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರ ಹುಡುಕಾಟ ನಡೆಸಿದ್ದರು. ಮಹಾರಾಷ್ಟ್ರ ಗಡಿಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಶನಿವಾರ ನಗರದ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.
ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದ್ದರಿಂದ ಟ್ರಾನ್ಸಿಟ್ ವಾರೆಂಟ್ ಪಡೆದ ಸಿಐಡಿ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ ಪಿಎಸ್ಐ ಅಕ್ರಮದ ಆರೋಪ ಕೇಳಿಬಂದಾಗ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ತನ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ರಚನಾ ನಾಪತ್ತೆಯಾಗಿದ್ದರು.
CID police have arrested a top ranker in the rigged PSI recruitment examination. Sources said that Rachana who had secured the top spot in the women’s quota in the exam was arrested for alleged irregularities.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm