ಬ್ರೇಕಿಂಗ್ ನ್ಯೂಸ್
30-08-22 09:43 pm Bangalore Correspondent ಕರ್ನಾಟಕ
ಬೆಂಗಳೂರು, ಆ.30: ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ ಎಂದರು.
ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.
ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
Bangalore mysore highway flooded with rainwater Dk shivkumar slams BJP government Says the engineers who constructed the highway should be given a padma bhushan award.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm