ಬ್ರೇಕಿಂಗ್ ನ್ಯೂಸ್
01-09-22 12:54 pm HK News Desk ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ಉತ್ತರ ಪ್ರದೇಶದ ಮುಖ್ಯಮಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿಯಿಂದ ನಿರ್ಮಿತವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರದ ಕ್ಷೇಮಾವನವನ್ನು ಯೋಗಿ ಆದಿತ್ಯನಾಥ್ ಅವರು ಉದ್ಘಾಟನೆ ಮಾಡಲಿದ್ದಾರೆ. ಯೋಗಿ ಆಗಮನ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.
ಮಳೆ ಸಮಸ್ಯೆಯಾದರೆ ಬೆಂಗಳೂರಿನಿಂದ ಮಹದೇವಪುರಕ್ಕೆ ಯೋಗಿ ಕಾರಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಈಗಾಗಲೇ ನೆಲಮಂಗಲದ ಬಾವಿಕೆರೆ ಬಳಿ ಎರಡು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಯೋಗಿ ಭದ್ರತೆಗಾಗಿ 1 ಎಸ್ಪಿ, 1 ಎಎಸ್ಪಿ, 6 ಡಿವೈಎಸ್ಪಿ, 20 ಸಿಪಿಐ, 50 ಪಿಎಸ್ಐ, 600 ಪೊಲೀಸ್ ಸಿಬ್ಬಂದಿ, 1 ಕೆಎಸ್ಆರ್ಪಿ ತುಕಡಿ, ಹಾಗೂ 2 ಡಿಎಆರ್ ತುಕಡಿ ನಿಯೋಜಿಸಲಾಗಿದೆ.

ಮತ್ತೊಂದೆಡೆ ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಹೊರವಲಯದ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ.

ಕಾರ್ಯಕ್ರದಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 25 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದೆ. ನಾಳೆ ಮಧ್ಯಾಹ್ನ 12:55ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್ಪೋರ್ಟ್ಗೆ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎನ್.ಎಂ.ಪಿ.ಎ ಹೆಲಿಪ್ಯಾಡ್ಗೆ ಬಂದು ಬಳಿಕ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ.
ಎನ್ ಎಂಪಿಟಿ, ಎಂಆರ್ಪಿಎಲ್, ರಾಜ್ಯ ಮೀನುಗಾರಿಕೆ ಇಲಾಖೆಯ ಯೋಜನೆಯ ಶಿಲಾನ್ಯಾಸ, ಲೋಕಾರ್ಪಣೆಯನ್ನು ಪ್ರಧಾನಿ ಮಾಡಲಿದ್ದಾರೆ. ಎಸ್.ಪಿ.ಜಿ ಅಧಿಕಾರಿಗಳು ಮೂರು ದಿನಗಳಿಂದ ಮಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಮಾವೇಶಕ್ಕೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯಕರ್ತರನ್ನು ಕರೆತರಲು 1461 ಬಸ್, 200 ಟಿಟಿ ಬುಕ್ಕಿಂಗ್ ಮಾಡಲಾಗಿದೆ.
Uttar Pradesh Chief Minister Yogi Adityanath will visit Bangalore on Thursday. He will inaugurate the ‘Sri Dharmasthala Nature Therapy and Yoga Education Institute’ built on the outskirts of the city.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm