ಬ್ರೇಕಿಂಗ್ ನ್ಯೂಸ್
01-09-22 12:54 pm HK News Desk ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ಉತ್ತರ ಪ್ರದೇಶದ ಮುಖ್ಯಮಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿಯಿಂದ ನಿರ್ಮಿತವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರದ ಕ್ಷೇಮಾವನವನ್ನು ಯೋಗಿ ಆದಿತ್ಯನಾಥ್ ಅವರು ಉದ್ಘಾಟನೆ ಮಾಡಲಿದ್ದಾರೆ. ಯೋಗಿ ಆಗಮನ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.
ಮಳೆ ಸಮಸ್ಯೆಯಾದರೆ ಬೆಂಗಳೂರಿನಿಂದ ಮಹದೇವಪುರಕ್ಕೆ ಯೋಗಿ ಕಾರಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಈಗಾಗಲೇ ನೆಲಮಂಗಲದ ಬಾವಿಕೆರೆ ಬಳಿ ಎರಡು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಯೋಗಿ ಭದ್ರತೆಗಾಗಿ 1 ಎಸ್ಪಿ, 1 ಎಎಸ್ಪಿ, 6 ಡಿವೈಎಸ್ಪಿ, 20 ಸಿಪಿಐ, 50 ಪಿಎಸ್ಐ, 600 ಪೊಲೀಸ್ ಸಿಬ್ಬಂದಿ, 1 ಕೆಎಸ್ಆರ್ಪಿ ತುಕಡಿ, ಹಾಗೂ 2 ಡಿಎಆರ್ ತುಕಡಿ ನಿಯೋಜಿಸಲಾಗಿದೆ.

ಮತ್ತೊಂದೆಡೆ ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಹೊರವಲಯದ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ.

ಕಾರ್ಯಕ್ರದಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 25 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದೆ. ನಾಳೆ ಮಧ್ಯಾಹ್ನ 12:55ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್ಪೋರ್ಟ್ಗೆ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎನ್.ಎಂ.ಪಿ.ಎ ಹೆಲಿಪ್ಯಾಡ್ಗೆ ಬಂದು ಬಳಿಕ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ.
ಎನ್ ಎಂಪಿಟಿ, ಎಂಆರ್ಪಿಎಲ್, ರಾಜ್ಯ ಮೀನುಗಾರಿಕೆ ಇಲಾಖೆಯ ಯೋಜನೆಯ ಶಿಲಾನ್ಯಾಸ, ಲೋಕಾರ್ಪಣೆಯನ್ನು ಪ್ರಧಾನಿ ಮಾಡಲಿದ್ದಾರೆ. ಎಸ್.ಪಿ.ಜಿ ಅಧಿಕಾರಿಗಳು ಮೂರು ದಿನಗಳಿಂದ ಮಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಮಾವೇಶಕ್ಕೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯಕರ್ತರನ್ನು ಕರೆತರಲು 1461 ಬಸ್, 200 ಟಿಟಿ ಬುಕ್ಕಿಂಗ್ ಮಾಡಲಾಗಿದೆ.
Uttar Pradesh Chief Minister Yogi Adityanath will visit Bangalore on Thursday. He will inaugurate the ‘Sri Dharmasthala Nature Therapy and Yoga Education Institute’ built on the outskirts of the city.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm