ಬ್ರೇಕಿಂಗ್ ನ್ಯೂಸ್
04-09-22 02:45 pm HK News Desk ಕರ್ನಾಟಕ
ತುಮಕೂರು, ಸೆ.4: ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವ ಮಾಜಿ ಸಂಸತ್ ಸದಸ್ಯ ಎಸ್.ಪಿ.ಮುದ್ದಹನುಮೇಗೌಡ ಅವರು ಬಿಜೆಪಿ ಮುಖಂಡರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಇದೇ ವಾರದಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಗೌಡರು ಪಟ್ಟು ಹಿಡಿದಿದ್ದರು. ಇದು ಕೈಗೂಡುವ ಲಕ್ಷಣಗಳು ಕಾಣದಿದ್ದಾಗ ಕಾಂಗ್ರೆಸ್ ತೊರೆದಿದ್ದು, ಈಗ ಬಿಜೆಪಿ ಕದ ತಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಸಿದ್ದು ಇತ್ತೀಚಿನ ರಾಜಕೀಯ ಬೆಳವಣಿಗೆ, ತನಗಾದ ಅಪಮಾನ ಮತ್ತಿತರ ವಿಚಾರಗಳು ಚರ್ಚೆಯಾಗಿದೆ. ಇದೇ ವೇಳೆ, ಕುಣಿಗಲ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಖಚಿತಪಡಿಸಿಯೇ, ಪಕ್ಷ ಸೇರ್ಪಡೆ ಆಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಣಿಗಲ್ ಕ್ಷೇತ್ರದಿಂದ ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿರುವ ಡಿ.ಕೃಷ್ಣಕುಮಾರ್ ಮತ್ತೆ ತಾನೇ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ. ಈಗ ಅವರ ಮನವೊಲಿಸಿ, ಗೌಡರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಒಂದು ವೇಳೆ ಕೃಷ್ಣಕುಮಾರ್ ಬಂಡಾಯವೆದ್ದರೆ ಅವರನ್ನು ಪಕ್ಷದಲ್ಲೇ ಉಳಿಸಿಕೊಂಡು ಚುನಾವಣೆ ಎದುರಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.
All signs of Muddahanumegowda joining BJP. Former Tumkur Lok Sabha member S P Muddahanumegowda announced Thursday his decision to quit the Congress, a setback to the DK Shivakumar-led party ahead of the 2023 Assembly election.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm