ಬ್ರೇಕಿಂಗ್ ನ್ಯೂಸ್
06-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.6: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ರಣ ಮಳೆಯಾಗುತ್ತಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.
ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಖಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಕ್ಲರಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ತಂದೆ, ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿ ಶಾಲೆಯಿಂದ ಹೊರಟಿದ್ದು ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ.
ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ಕಾರಣ ರಸ್ತೆಯಲ್ಲಿ ಮಂಡಿ ಮುಳುಗುವಷ್ಟು ನೀರು ನಿಂತಿತ್ತು. ಅಖಿಲಾ ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದು ನೀರು ಹೆಚ್ಚಿದ್ದರಿಂದ ಸ್ಕೂಟರ್ ಇದ್ದಕ್ಕಿದ್ದಂತೆ ಆಫ್ ಆಗಿದೆ. ಈ ವೇಳೆ ಆಯತಪ್ಪಿ ಕೆಳಗೆ ಬೀಳುತ್ತಿದ್ದಾಗ ಸಹಾಯಕ್ಕೆಂದು ಬಲ ಭಾಗದಲ್ಲಿದ್ದ ವಿದ್ಯುತ್ ಕಂಬ ಮುಟ್ಟಿದ್ದಾರೆ. ಮಳೆಯ ಕಾರಣದಿಂದ ಕಂಬದಲ್ಲಿ ವಿದ್ಯುತ್ ಹರಿದಿದ್ದು ಶಾಕ್ ಆಗಿ ಸಾವನ್ನಪ್ಪಿದ್ದಾರೆ.
ಕೆಳಗೆ ಬಿದ್ದ ಯುವತಿಯನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅಖಿಲಾ ಕೊನೆಯುಸಿರೆಳೆದಿದ್ದಾರೆ. ನೀರು ಹೊರ ಹೋಗಲು ಸರಿಯಾದ ವ್ಯವಸ್ಥೆ ಮಾಡದೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನೂ ಮಾಡದಿರುವುದೇ ಅಖಿಲಾ ಸಾವಿಗೆ ನೇರ ಕಾರಣ ಎಂದು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
As rains continue to wreak havoc on Karnataka's Bengaluru, a 23-year-old got electrocuted in the city's Whitefield area and died. As per reports, she was returning from work last night when her scooty lost balance on a severely waterlogged road.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm