ಬ್ರೇಕಿಂಗ್ ನ್ಯೂಸ್
08-09-22 03:56 pm HK News Desk ಕರ್ನಾಟಕ
ತುಮಕೂರು,ಸೆ.8: ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದ ಲೇಡಿ ಟೀಚರ್ ಒಬ್ಬಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವಿಲಕ್ಷಣ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಕಳೆದ 25 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕಿ ಗಂಗಲಕ್ಷ್ಮಮ್ಮ ಸೇವೆ ಸಲ್ಲಿಸುತ್ತಿದ್ದಾಳೆ. ಆದರೆ ಕಳೆದ 5 ವರ್ಷದಿಂದ ಮದ್ಯ ವ್ಯಸನಕ್ಕೆ ದಾಸಳಾಗಿದ್ದಳು.
ಮದ್ಯಪಾನ ಮಾಡಿ ಪಾಠ ಮಾಡಿ, ವಿದ್ಯಾರ್ಥಿಗಳಿಗೆ ಸುಖಾಸುಮ್ಮನೆ ಹೊಡೆಯುವುದು ಹಾಗೂ ಸಹೋದ್ಯೋಗಿಗಳ ಜೊತೆ ಜಗಳ ಮಾಡುತ್ತಿದ್ದಳು. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯುಂಟಾಗಿತ್ತು. ಇದನ್ನು ಮನಗಂಡ ಪೋಷಕರು ಶಿಕ್ಷಕಿ ಗಂಗಲಕ್ಷ್ಮಮ್ಮಗೆ ತಪ್ಪು ತಿದ್ದಿಕೊಳ್ಳುವಂತೆ ತಾಕೀತು ಮಾಡಿದ್ದರು. ಆದರೆ ಗಂಗಲಕ್ಷ್ಮಮ್ಮ ತನ್ನ ಚಾಳಿ ಬದಲಿಸಲಿಲ್ಲ. ಇದರಿಂದ ಪೋಷಕರು ಶಾಲೆಗೆ ಬೀಗ ಹಾಕಿ ಶಿಕ್ಷಕಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು.

ಈ ವೇಳೆ ಸ್ಥಳಕ್ಕೆ ಬಿ.ಇ.ಒ ಹನುಮಾ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಕ್ಷಕಿಯ ಟೇಬಲ್ನ ಡ್ರಾಯರ್ ಓಪನ್ ಮಾಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದರು. ಸ್ವತಃ ಬಿಇಒ ಡ್ರಾಯರ್ ಓಪನ್ ಮಾಡಲು ಹೋದಾಗ ಶಿಕ್ಷಕಿ ಪ್ರತಿರೋಧ ಒಡ್ಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಟೇಬಲನ್ನು ಹೊರಕ್ಕೆ ತಂದು ಡ್ರಾಯರ್ ಬೀಗ ಮುರಿದಿದ್ದಾರೆ. ಆಗ ಡ್ರಾಯರ್ನಲ್ಲಿ ಒಂದು ಫುಲ್ ಮತ್ತು ಎರಡು ಖಾಲಿ ಮದ್ಯದ ಬಾಟಲ್ಗಳು ಪತ್ತೆಯಾಗಿದೆ.
ಮದ್ಯದ ಬಾಟಲ್ ಪತ್ತೆಯಾಗುತಿದ್ದಂತೆ ಕೊಠಡಿ ಬೀಗಹಾಕೊಂಡು ಗಂಗ ಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದಾಳೆ. ಬಳಿಕ ಪೊಲೀಸರು ಬಂದು ಮದ್ಯದ ಬಾಟಲನ್ನು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಗಂಗಲಕ್ಷ್ಮಮ್ಮಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಒಟ್ಟಾರೆ ಚಿಕ್ಕಸಾರಂಗಿ ಶಾಲೆಯ ಮುಂದೆ ನಡೆದ ಹೈಡ್ರಾಮಾಕ್ಕೆ ಗ್ರಾಮಸ್ಥರು ಸಾಕ್ಷಿಯಾಗಿದ್ದಾರೆ.
Lady Teacher held for consuming alcohol and taking classes in Tumkur. It is said that she's been consuming alcohol for five years and attends school to teach.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm