ಬ್ರೇಕಿಂಗ್ ನ್ಯೂಸ್
09-09-22 02:49 pm HK News Desk ಕರ್ನಾಟಕ
ಮೈಸೂರು, ಸೆ.9 : ಖ್ಯಾತ ನಟ ಪುನೀತ್ ರಾಜಕುಮಾರ್ ಅನುವಂಶೀಯ ಕಾರಣಗಳಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದರು. ಪುನೀತ್ ಸಹೋದರರಿಗೂ ಹೃದಯ ಸಂಬಂಧಿ ತೊಂದರೆಗಳಿವೆ. ರಾಘವೇಂದ್ರ, ಶಿವರಾಜಕುಮಾರ್ ಅವರಿಗೂ ಹೃದಯ ತೊಂದರೆಗಳಿವೆ. ಹಾಗಾಗಿ ಪುನೀತ್ ಸಾವಿಗೆ ಅನುವಂಶೀಯ ಹಿನ್ನೆಲೆಯೇ ಕಾರಣ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ, ಖ್ಯಾತ ಹೃದಯ ತಜ್ಞ ಡಾ.ಸಿ.ಎನ್ ಮಂಜುನಾಥ್ ಹೇಳಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಕೇಳಿದ ಪ್ರಶ್ನೆಗೆ, ಕುಟುಂಬದ ಅನುವಂಶಿಕ ಹಿನ್ನೆಲೆಯೇ ಕಾರಣ ಎಂದು ಹೇಳಿದರು.

ನಮ್ಮ ದೇಶದಲ್ಲಿ 50% ಸಾವುಗಳು ಹೃದಯಾಘಾತ, ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ರೋಗದಿಂದ ಸಂಭವಿಸುತ್ತಿದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಒಂಟಿತನದಿಂದ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚುತ್ತಿದೆ. ಮೊಬೈಲ್, ಟಿವಿ ಗೀಳಿಗೆ ಅಂಟಿಕೊಂಡು ಬಹುಬೇಗನೆ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಮೊದಲೆಲ್ಲಾ ವಯಸ್ಸಾದ ತಂದೆ ತಾಯಿಯರನ್ನು ಮಕ್ಕಳು ಆಸ್ಪತ್ರೆಗೆ ಕರೆ ತರುತ್ತಿದ್ದರು. ಆದರೀಗ ತಂದೆ ತಾಯಿಯೇ ಅವರ ಮಕ್ಕಳನ್ನು ಚಿಕಿತ್ಸೆಗೆ ಕರೆತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಜೀವನ ಶೈಲಿ ಬದಲಾಗಿದ್ದು, ಇದಕ್ಕೆ ನಗರ ಪಟ್ಟಣಗಳು, ಹಳ್ಳಿಗಳು ಹೊರತಾಗಿಲ್ಲ. ಯುವ ಭಾರತೀಯರ, ಮಧ್ಯ ವಯಸ್ಕರ ಹೃದಯದ ಆರೋಗ್ಯ ಚೆನ್ನಾಗಿಲ್ಲ. ಹೃದ್ರೋಗಕ್ಕೆ ತುತ್ತಾಗುತ್ತಿರುವ ವಯಸ್ಕರಲ್ಲಿ ಶೇಕಡ 50 ರಷ್ಟು ಧೂಮಪಾನಿಗಳಾಗಿರುತ್ತಾರೆ. ಕೆಲವರಿಗೆ ಅನುವಂಶೀಯವಾಗಿಯೂ ಹೃದಯಾಘಾತ ಆಗುವ ಸಂಭವವಿದೆ. ಅಂತಹ ಕುಟುಂಬ ಸದಸ್ಯರು ಎಚ್ಚರಿಕೆ ವಹಿಸಬೇಕು. ಬದಲಾದ ಜೀವನ ಶೈಲಿಯಿಂದಾಗಿ ಅತಿಯಾದ ಒತ್ತಡದಿಂದ ಹೃದಯಾಘಾತ ಸಂಭವಿಸುತ್ತಿದೆ ಎಂದು ಮಂಜುನಾಥ್ ಹೇಳಿದರು.
ವಾಯುಮಾಲಿನ್ಯ ಕೂಡ ಹೃದಯಾಘಾತಕ್ಕೆ ಕಾರಣವಾಗುತ್ತಿದೆ. ವಾಹನಗಳು ಹೊರಸೂಸುವ ಹೊಗೆ, ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಮಾಲಿನ್ಯವಾದ ಗಾಳಿಯನ್ನು ಉಸಿರಾಡುವುದರಿಂದ ಹೃದಯಾಘಾತಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದರು. ಹೃದಯಾಘಾತ ಸಂಭವಿಸಿದಾಗ ತಡ ಮಾಡದೇ ಚಿಕಿತ್ಸೆ ಪಡೆಯಬೇಕು. ಮೂವತ್ತು ನಿಮಿಷ ತಡಮಾಡಿದರೆ ಸಾವಿನ ಪ್ರಮಾಣ 7% ಹೆಚ್ಚುತ್ತಾ ಹೋಗುತ್ತದೆ. ಕೂಡಲೇ ಪ್ರಾಥಮಿಕ ಚಿಕಿತ್ಸೆ ಪಡೆಯುವುದರಿಂದ ಸಾವನ್ನು ತಡೆಯಬಹುದು. 35 ವರ್ಷ ದಾಟಿದ ಪುರುಷರು, 45 ವರ್ಷ ದಾಟಿದ ಮಹಿಳೆಯರು ಸಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಡಾ. ಮಂಜುನಾಥ್ ಸಲಹೆ ನೀಡಿದ್ದಾರೆ.
Actor Puneeth Rajkumar death of heart attack was due to family heredity issue says cardiologist doctor
23-04-26 01:36 pm
HK News Staffer
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm