ಬ್ರೇಕಿಂಗ್ ನ್ಯೂಸ್
09-09-22 09:03 pm HK News Desk ಕರ್ನಾಟಕ
ಶಿವಮೊಗ್ಗ, ಸೆ.9: ಹಿಂದು ಮಹಾಸಭಾ ವತಿಯಿಂದ ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಸಾವರ್ಕರ್, ನಾಥುರಾಮ್ ಗೋಡ್ಸೆ, ತಿಲಕ್, ಅಂಬೇಡ್ಕರ್, ಸುಭಾಶ್ಚಂದ್ರ ಬೋಸರಿಂದ ಹಿಡಿದು ಇತ್ತೀಚೆಗೆ ಕೊಲೆಯಾದ ಹರ್ಷ, ಪ್ರವೀಣ್ ನೆಟ್ಟಾರು ಫೋಟೋಗಳು ರಾರಾಜಿಸಿದವು.
ಕೇಸರಿ ಶಾಲು, ಪೇಟ ತೊಟ್ಟಿದ್ದ ಕಾರ್ಯಕರ್ತರು ಸ್ವಾತಂತ್ರ್ಯ ಯೋಧರ ಭಾವಚಿತ್ರಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬಂತು. ಮೆರವಣಿಗೆ ಸಾಗುವ ಬೀದಿಯನ್ನೆಲ್ಲ ಕೇಸರಿ ಬಾವುಟ, ತೋರಣಗಳಿಂದ ಶೃಂಗಾರ ಮಾಡಲಾಗಿತ್ತು. ಸಂಗೊಳ್ಳಿ ರಾಯಣ್ಣ, ಭಗತ್ ಸಿಂಗ್, ಪುರಂದರ ದಾಸರು, ವಿವೇಕಾನಂದ, ಸರ್ದಾರ್ ಪಟೇಲ್, ಝಾನ್ಸಿ ರಾಣಿ, ರಾಣಾ ಪ್ರತಾಪ್ ಸಿಂಹ ಮುಂತಾದ ಮಹನೀಯರ ಫೋಟೋಗಳನ್ನೂ ಬೀದಿಯಲ್ಲಿ ಕಟೌಟ್ ರೂಪದಲ್ಲಿ ಹಾಕಲಾಗಿತ್ತು. ಶಿವಮೊಗ್ಗದಲ್ಲಿ ಇತ್ತೀಚೆಗೆ ಕೊಲೆಯಾದ ಹರ್ಷ ಮತ್ತು ಸುಳ್ಯದಲ್ಲಿ ಕೊಲೆಯಾದ ಪ್ರವೀಣ್ ನೆಟ್ಟಾರು ಫೋಟೋಗಳನ್ನು ಯುವಕರು ಹಿಡಿದಿದ್ದರು. ಕೆಲವು ಪುನೀತ್ ರಾಜಕುಮಾರ್ ಫೋಟೋವನ್ನೂ ಹಿಡಿದುಕೊಂಡಿದ್ದರು.

ಗಣಪತಿ ವಿಗ್ರಹ ಮೆರವಣಿಗೆ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಾವರ್ಕರ್ ವಿವಾದಕ್ಕೆ ಕಾರಣವಾಗಿದ್ದ ಅಮೀರ್ ಅಹ್ಮದ್ ವೃತ್ತದಲ್ಲಿ ಬೃಹತ್ ವೀರ ಸಾವರ್ಕರ್ ಮಹಾದ್ವಾರ ನಿರ್ಮಿಸಲಾಗಿತ್ತು. ಇತ್ತೀಚೆಗೆ ಸ್ವಾತಂತ್ರ್ಯ ದಿನದಂದೇ ಇದೇ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಆನಂತರ, ಒಬ್ಬನ ಕೊಲೆಯತ್ನವೂ ನಡೆದಿತ್ತು. ಮೆರವಣಿಗೆಯಲ್ಲಿ ಸಾಗಿಬಂದ ಗಣಪತಿ ವಿಗ್ರಹದ ಹಿಂಭಾಗದಲ್ಲಿ ಸಾವರ್ಕರ್ ಫೋಟೋ ಅಳವಡಿಸಲಾಗಿತ್ತು. ಅಮೀರ್ ಅಹ್ಮದ್ ವೃತ್ತ ಹಾಗೂ ಬಸ್ ನಿಲ್ದಾಣದ ಬಳಿ ಕೇಸರಿ ಧ್ವಜಗಳು ಹಾರಾಡಿದವು. ಮೆರವಣಿಗೆಯಲ್ಲಿ ಸಾಗುತ್ತಿದ್ದ ಯುವಕರು ಹಿಂದು ರಾಷ್ಟ್ರದ ಪರ ಘೋಷಣೆಗಳನ್ನೂ ಹಾಕಿದರು.
ಗಾಂಧಿ ಬಜಾರ್ ನಲ್ಲಿ ಪೊಲೀಸರ ಸರ್ಪಗಾವಲಿನ ಮಧ್ಯೆಯೂ ಡೋಲು ವಾದನಕ್ಕೆ ಯುವಕ- ಯುವತಿಯರು ಡ್ಯಾನ್ಸ್ ಮಾಡಿದರು. ಕೇಸರಿ ಪೇಟದಲ್ಲಿ ಮಿಂಚುತ್ತಿದ್ದ ಯುವಕ- ಯುವತಿಯರ ನೃತ್ತ ಆಕರ್ಷಕವಾಗಿತ್ತು. ಗಾಂಧಿ ಬಜಾರಿನ ಸುನ್ನಿ ಜಾಮಿಯಾ ಮಸೀದಿ ಮತ್ತು ಇತ್ತೀಚೆಗೆ ಗಲಾಟೆಗೆ ಕಾರಣವಾಗಿದ್ದ ಅಮೀರ್ ಅಹ್ಮದ್ ವೃತ್ತದಲ್ಲಿ ಆರ್ ಎಎಫ್ ಪಡೆಯನ್ನು ನಿಯೋಜನೆ ಮಾಡಲಾಗಿದೆ. ಉಳಿದಂತೆ ಮೆರವಣಿಗೆ ಸಾಗುವ ಉದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಮೆರವಣಿಗೆಯಲ್ಲಿ ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು, ಹಿಂದು ಸಂಘಟನೆಗಳ ನಾಯಕರು ಪಾಲ್ಗೊಂಡಿದ್ದಾರೆ.
Members of a right wing group were seen carrying portrait of Nathuram Godse, the assassin of Mahatma Gandhi Shivamogga district. The activists were seen carrying the poster during a Ganesh Visarjan procession.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm