ಬ್ರೇಕಿಂಗ್ ನ್ಯೂಸ್
11-09-22 08:36 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಸೆಪ್ಟೆಂಬರ್ ಹತ್ತರಂದು ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರಕಾರದ ವತಿಯಿಂದ ನಾರಾಯಣ ಗುರುಗಳ ಜಯಂತಿ ಆಚರಣೆ ಮಾಡಿಕೊಂಡು ಬರಲಾಗಿತ್ತು. ಆದರೆ ಈ ಬಾರಿ ಆಚರಣೆ ಮಾಡಿಲ್ಲ. ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೂ ಕಾರ್ಯಕ್ರಮ ನಡೆಸಿಲ್ಲ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರದ ಈ ಧೋರಣೆಯಿಂದ ಈಡಿಗ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಅಪಮಾನವಾಗಿದೆ ಎಂದವರು ಹೇಳಿದ್ದಾರೆ. ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರು ಜಯಂತಿ ಘೋಷಣೆ ಮಾಡಿದ್ದರು. ಅವರಿದ್ದಾಗ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಚರಣೆ ಮಾಡುತ್ತ ಬರಲಾಗಿತ್ತು. ಆದರೆ, ಈಗಿನ ಸರಕಾರವು ರಾಜ್ಯ ಮಟ್ಟದ ಆಚರಣೆಯನ್ನು ನಡೆಸದೆ ಅವಮಾನ ಮಾಡಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬದಲು ಮಂಗಳೂರಿನಲ್ಲಿ ನಡೆಸಲಾಗಿದೆ. ನಮ್ಮ ಸಮಾಜದ ಸಚಿವರಿಗೆ ಈ ಕಾರ್ಯಕ್ರಮದ ಮಾಹಿತಿ ನೀಡಿಲ್ಲ. ಸರಕಾರವು ಜಯಂತಿ ದಿನದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಮಾತು ತಪ್ಪಿದೆ. ಇದನ್ನು ನಮ್ಮ ಸಮಾಜ ಖಂಡನೆ ಮಾಡುತ್ತದೆ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಬಾರಿ ನಾರಾಯಣ ಗುರು ಜಯಂತಿಯನ್ನು ರಾಜ್ಯ ಸರಕಾರದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಕಾರ್ಯಕ್ರಮ ನಡೆಸುವುದಕ್ಕೂ ಮುನ್ನ ಸಮಾಜದ ಗಣ್ಯರನ್ನು, ಸಮಾಜದ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.
Sri Narayana Guru Jayanti not held in Banquet hall Pranavanada swami angry
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm