ಬ್ರೇಕಿಂಗ್ ನ್ಯೂಸ್
11-09-22 08:36 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಸೆಪ್ಟೆಂಬರ್ ಹತ್ತರಂದು ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರಕಾರದ ವತಿಯಿಂದ ನಾರಾಯಣ ಗುರುಗಳ ಜಯಂತಿ ಆಚರಣೆ ಮಾಡಿಕೊಂಡು ಬರಲಾಗಿತ್ತು. ಆದರೆ ಈ ಬಾರಿ ಆಚರಣೆ ಮಾಡಿಲ್ಲ. ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೂ ಕಾರ್ಯಕ್ರಮ ನಡೆಸಿಲ್ಲ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರದ ಈ ಧೋರಣೆಯಿಂದ ಈಡಿಗ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಅಪಮಾನವಾಗಿದೆ ಎಂದವರು ಹೇಳಿದ್ದಾರೆ. ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರು ಜಯಂತಿ ಘೋಷಣೆ ಮಾಡಿದ್ದರು. ಅವರಿದ್ದಾಗ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಚರಣೆ ಮಾಡುತ್ತ ಬರಲಾಗಿತ್ತು. ಆದರೆ, ಈಗಿನ ಸರಕಾರವು ರಾಜ್ಯ ಮಟ್ಟದ ಆಚರಣೆಯನ್ನು ನಡೆಸದೆ ಅವಮಾನ ಮಾಡಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬದಲು ಮಂಗಳೂರಿನಲ್ಲಿ ನಡೆಸಲಾಗಿದೆ. ನಮ್ಮ ಸಮಾಜದ ಸಚಿವರಿಗೆ ಈ ಕಾರ್ಯಕ್ರಮದ ಮಾಹಿತಿ ನೀಡಿಲ್ಲ. ಸರಕಾರವು ಜಯಂತಿ ದಿನದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಮಾತು ತಪ್ಪಿದೆ. ಇದನ್ನು ನಮ್ಮ ಸಮಾಜ ಖಂಡನೆ ಮಾಡುತ್ತದೆ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಬಾರಿ ನಾರಾಯಣ ಗುರು ಜಯಂತಿಯನ್ನು ರಾಜ್ಯ ಸರಕಾರದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಕಾರ್ಯಕ್ರಮ ನಡೆಸುವುದಕ್ಕೂ ಮುನ್ನ ಸಮಾಜದ ಗಣ್ಯರನ್ನು, ಸಮಾಜದ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.
Sri Narayana Guru Jayanti not held in Banquet hall Pranavanada swami angry
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm