ಬ್ರೇಕಿಂಗ್ ನ್ಯೂಸ್
11-09-22 08:36 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಸೆಪ್ಟೆಂಬರ್ ಹತ್ತರಂದು ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರಕಾರದ ವತಿಯಿಂದ ನಾರಾಯಣ ಗುರುಗಳ ಜಯಂತಿ ಆಚರಣೆ ಮಾಡಿಕೊಂಡು ಬರಲಾಗಿತ್ತು. ಆದರೆ ಈ ಬಾರಿ ಆಚರಣೆ ಮಾಡಿಲ್ಲ. ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೂ ಕಾರ್ಯಕ್ರಮ ನಡೆಸಿಲ್ಲ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರದ ಈ ಧೋರಣೆಯಿಂದ ಈಡಿಗ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಅಪಮಾನವಾಗಿದೆ ಎಂದವರು ಹೇಳಿದ್ದಾರೆ. ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರು ಜಯಂತಿ ಘೋಷಣೆ ಮಾಡಿದ್ದರು. ಅವರಿದ್ದಾಗ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಚರಣೆ ಮಾಡುತ್ತ ಬರಲಾಗಿತ್ತು. ಆದರೆ, ಈಗಿನ ಸರಕಾರವು ರಾಜ್ಯ ಮಟ್ಟದ ಆಚರಣೆಯನ್ನು ನಡೆಸದೆ ಅವಮಾನ ಮಾಡಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬದಲು ಮಂಗಳೂರಿನಲ್ಲಿ ನಡೆಸಲಾಗಿದೆ. ನಮ್ಮ ಸಮಾಜದ ಸಚಿವರಿಗೆ ಈ ಕಾರ್ಯಕ್ರಮದ ಮಾಹಿತಿ ನೀಡಿಲ್ಲ. ಸರಕಾರವು ಜಯಂತಿ ದಿನದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಮಾತು ತಪ್ಪಿದೆ. ಇದನ್ನು ನಮ್ಮ ಸಮಾಜ ಖಂಡನೆ ಮಾಡುತ್ತದೆ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಬಾರಿ ನಾರಾಯಣ ಗುರು ಜಯಂತಿಯನ್ನು ರಾಜ್ಯ ಸರಕಾರದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಕಾರ್ಯಕ್ರಮ ನಡೆಸುವುದಕ್ಕೂ ಮುನ್ನ ಸಮಾಜದ ಗಣ್ಯರನ್ನು, ಸಮಾಜದ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.
Sri Narayana Guru Jayanti not held in Banquet hall Pranavanada swami angry
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm