ಬ್ರೇಕಿಂಗ್ ನ್ಯೂಸ್
11-09-22 09:43 pm HK News Desk ಕರ್ನಾಟಕ
ಬೆಂಗಳೂರು, ಸೆ 11,: ಮಂಗಳೂರಿನಲ್ಲಿ ಮತ್ತು ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾರಂಭಗಳಿಗೆ ಆಗಮಿಸಿದ್ದ ಜನಸಾಗರ ಕಂಡು ಸಿದ್ದರಾಮಯ್ಯ ಅವರು ಸ್ಥಿಮಿತ ಕಳೆದುಕೊಂಡಂತಿದೆ. ಹೀಗಾಗೇ ಅವರು ಸುಳ್ಳು, ವ್ಯರ್ಥ ಆರೋಪಗಳ ಮೂಲಕ ನಾಟಕ ಮುಂದುವರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದರು.
ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಲ್ಲಿ ವಾಗ್ದಾಳಿ ನಡೆಸಿರುವ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಜನ ನಿರ್ಧರಿಸಿದ್ದಾರೆ. ಕಾಂಗ್ರೆಸ್ಸಿಗರ ಅಧಿಕಾರದ ಕನಸು ಕೇವಲ ಹಗಲುಗನಸಾಗಿ ಉಳಿಯಲಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಜನರು ಸೋಲಿಸಿ ರಾಜಕೀಯವಾಗಿ ಮೂಲೆಗುಂಪು ಮಾಡಲಿದ್ದಾರೆ. ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ನಳಿನ್ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಎಂದರೆ ಡೋಂಗಿತನ, ಹಿಂದೂ ವಿರೋಧಿತನದ ಸಂಕೇತ. ರಾಷ್ಟ್ರವಿರೋಧಿ ಶಕ್ತಿಗಳ ಜೊತೆ ಕೈ ಜೋಡಿಸುವ ಮತ್ತು ಧರ್ಮಗಳನ್ನು ಒಡೆಯುವ ಸಿದ್ದರಾಮಯ್ಯರ ಸ್ವಾರ್ಥ ರಾಜಕಾರಣ ಜನರಿಗೆ ಸ್ಪಷ್ಟವಾಗಿ ತಿಳಿದಿದೆ. ನೀವು ಟ್ವೀಟ್ಗಳ ಮೂಲಕ ಹಾಗೂ ಹೇಳಿಕೆಗಳ ಮೂಲಕ ನಿಮ್ಮನ್ನೇ ನೀವು ಜನರ ಮುಂದಿಟ್ಟು ಅಪಹಾಸ್ಯಕ್ಕೆ ಸಿಲುಕುತ್ತಿದ್ದೀರಿ. ಬಿಜೆಪಿ ಸರ್ಕಾರ ಜನ ಪರವಾಗಿದೆ. ಬಿಜೆಪಿ ಯಾವತ್ತೂ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಮತ್ತು ಸಶಕ್ತೀಕರಣದ ಪ್ರಯತ್ನದಲ್ಲಿರುವುದು ಜನರಿಗೆ ತಿಳಿದಿದೆ ಎಂದು ಕಟಿಲ್ ಹೇಳಿದರು.
ಒಮ್ಮೆ ನಿರುದ್ಯೋಗ ಸಮಸ್ಯೆ ಎನ್ನುವ ಸಿದ್ದರಾಮಣ್ಣ, ಮತ್ತೆ ಪ್ಲೇಟ್ ಬದಲಿಸಿ 40ಪರ್ಸೆಂಟ್ ಭ್ರಷ್ಟಾಚಾರ ಎಂದು ರಾಗ ಎಳೆಯುತ್ತಾರೆ. ಆರ್ಕಾವತಿ ಹಗರಣ ಸೇರಿ ವಿವಿಧ ಭ್ರಷ್ಟಾಚಾರ ಹಗರಣಗಳನ್ನು ಬಿಜೆಪಿ ಸರಕಾರ ಬಯಲಿಗೆ ಎಳೆಯಲಿದೆ ಎಂದು ತಿಳಿಸಿದ ಬಳಿಕ ಸಿದ್ದರಾಮಣ್ಣನಿಗೆ ಚಳಿ ಜ್ವರ ಬಂದಂತಿದೆ. ಅದಕ್ಕಾಗಿಯೇ ಸದಾ ಪ್ರಚಾರದಲ್ಲಿರಲು ಸುಳ್ಳು ಸುಳ್ಳು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಸಿದ್ದರಾಮಯ್ಯನವರು ಸ್ಪಷ್ಟ ಮಾಹಿತಿ ಇಲ್ಲದೆ ಆರೋಪಗಳನ್ನು ಮಾಡುತ್ತಿದ್ದಾರೆ. ಬಾಯಿ ಚಪಲಕ್ಕಾಗಿ ಮಾತನಾಡುತ್ತಿದ್ದಾರೆ. ಮಳೆ ಹಾನಿ ಸಂಬಂಧ ನೀವು ಮತ್ತು ನಿಮ್ಮ ಪಕ್ಷದವರು ಎಷ್ಟು ಪ್ರವಾಸ ಮಾಡಿದ್ದೀರಿ?. ಕಾಟಾಚಾರಕ್ಕೆ ಬಾದಾಮಿಗೆ ಹೋಗಿ ಬಂದಿದ್ದಲ್ಲವೇ?. ನಿಮ್ಮ ಅಸಲಿಯತ್ತು ನಮಗೆ ಮಾತ್ರವಲ್ಲದೆ ಜನರಿಗೂ ಗೊತ್ತಿದೆ. ನಕಲಿ ಸಮಾಜವಾದಿಗಳು, ನಕಲಿ ಬುದ್ಧಿಜೀವಿಗಳ ಜೊತೆ ಸೇರಿ ಮಾತನಾಡುವ ನಿಮ್ಮನ್ನು ಜನರು ನಂಬಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಿದ್ದರಾಮಯ್ಯ ಪ್ರವಾಸ ಬಗ್ಗೆ ವ್ಯಂಗ್ಯವಾಡಿದರು.
Siddaramaiah is shocked seeing the massive crow during BJP program in Mangalore slams Nalin Kumar. Siddaramaiah is a anti Hindu and a liar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm