ಬ್ರೇಕಿಂಗ್ ನ್ಯೂಸ್
11-09-22 10:26 pm HK News Desk ಕರ್ನಾಟಕ
ಹೈದರಾಬಾದ್, ಸೆ.1: ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆದುರಾಗಿ ಶೀಘ್ರದಲ್ಲೇ ಪರ್ಯಾಯ ರಾಷ್ಟ್ರೀಯ ಪಕ್ಷವೊಂದನ್ನು ಸ್ಥಾಪಿಸಲಾಗುವುದು ಎಂದು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಹೇಳಿದ್ದಾರೆ.
ಭಾನುವಾರ ಮಧ್ಯಾಹ್ನ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ಡಿ ಕುಮಾರಸ್ವಾಮಿ ಅವರು ದಿಢೀರ್ ಆಗಿ ಹೈದರಾಬಾದಿಗೆ ತೆರಳಿ ಚಂದ್ರಶೇಖರ್ ರಾವ್ ಅವರ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಮುಂದಿನ ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆ ಆಗುವ ಬಗ್ಗೆ ಇಬ್ಬರ ಭೇಟಿ ಕುತೂಹಲ ಮೂಡಿಸಿದೆ. ಇವರಿಬ್ಬರ ಮಾತುಕತೆಯ ಬೆನ್ನಲ್ಲೇ ಚಂದ್ರಶೇಖರ್ ರಾವ್, ರಾಷ್ಟ್ರೀಯ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದಾರೆ.
ಅಕ್ಟೋಬರ್ ಮೊದಲ ವಾರದಲ್ಲಿ ಭಾರತ್ ರಾಷ್ಟ್ರ ಸಮಿತಿ ಹೆಸರಲ್ಲಿ ರಾಷ್ಟ್ರೀಯ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದಾರೆ. ಇದಕ್ಕಾಗಿ ದೇಶಾದ್ಯಂತ ಬಿಜೆಪಿ ಮತ್ತು ಕಾಂಗ್ರೆಸ್ ಹೊರತಾದ ಪಕ್ಷಗಳ ನಾಯಕರ ಜೊತೆಗೆ ಕೆಸಿಆರ್ ಮಾತುಕತೆಯನ್ನೂ ನಡೆಸಿದ್ದಾರೆ. ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಮುಖ್ಯಸ್ಥರೂ ಆಗಿರುವ ಚಂದ್ರಶೇಖರ್ ರಾವ್ ಪಕ್ಷದ ವತಿಯಿಂದಲೇ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಗಾಗಿ ಆಂದೋಲನ ರಚಿಸುವುದಕ್ಕೂ ಮುನ್ನ ಕೈಗೊಂಡಿದ್ದ ರೀತಿಯಲ್ಲೇ ರಾಷ್ಟ್ರೀಯ ಕಾರ್ಯಸೂಚಿ ರೂಪಿಸಲಿದ್ದು, ಅದಕ್ಕಾಗಿ ಸಮಾಜದ ವಿವಿಧ ಸ್ತರಗಳ ಪ್ರಮುಖರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಅರ್ಥ ಶಾಸ್ತ್ರಜ್ಞರು, ವಿಚಾರವಾದಿಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷದ ಘೋಷಣೆ ಆಗಲಿದೆ. ಅದಕ್ಕಾಗಿ ರೂಪುರೇಷೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ಕೆಸಿಆರ್ ತಿಳಿಸಿದ್ದಾರೆ.
ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕೆಟಿ ರಾಮ ರಾವ್ ನೀಡಿದ ಆತಿಥ್ಯಕ್ಕೆ ಋಣಿಯಾಗಿದ್ದೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಕೆಸಿಆರ್ ಭೇಟಿಗೂ ಮುನ್ನ ಟಿಆರ್ ಎಸ್ ಕಾರ್ಯಾಧ್ಯಕ್ಷ ಕೆ.ಟಿ ರಾಮ ರಾವ್ ಅವರನ್ನೂ ಭೇಟಿ ಮಾಡಿ ಚರ್ಚೆ ನಡೆಸಿದ್ದರು.
As new political equations emerge in the run-up to the 2024 general elections, Former Karnataka Chief Minister and Janata Dal Secular (JDS) leader HD Kumaraswamy met Telangana Chief Minister K Chandrashekar Rao (KCR) in Hyderabad today to discuss the prevailing political situation in the country and KCR's plan to launch a national-level party.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm