ಬ್ರೇಕಿಂಗ್ ನ್ಯೂಸ್
11-09-22 10:45 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಅರಣ್ಯ ರಕ್ಷಣೆಯಲ್ಲಿ ತೊಡಗಿಕೊಂಡವರು ಕರ್ತವ್ಯ ಸಂದರ್ಭ ಮೃತಪಟ್ಟರೆ ಕುಟುಂಬಸ್ಥರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು 30ರಿಂದ 50 ಲಕ್ಷಕ್ಕೆ ಏರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭಾನುವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹುತಾತ್ಮರ ಸಲುವಾಗಿ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು 20ರಿಂದ 30 ಲಕ್ಷಕ್ಕೆ ಏರಿಸಿದ್ದರು. ನಮ್ಮ ಸರಕಾರ ಅದನ್ನು ಏರಿಸುತ್ತಿದ್ದು, 50 ಲಕ್ಷಕ್ಕೆ ಏರಿಸುವ ನಿರ್ಧಾರ ಕೈಗೊಂಡಿದ್ದೇವೆ. ಅಲ್ಲದೆ, ಕುಟುಂಬದ ಒಬ್ಬರಿಗೆ ಇಲಾಖೆಯಲ್ಲಿ ಉದ್ಯೋಗವನ್ನೂ ಕೊಡಿಸಲಾಗುವುದು. ನೀವು ಅರಣ್ಯವನ್ನು ಸಂರಕ್ಷಿಸುತ್ತೀರಿ. ನಿಮ್ಮನ್ನು ಸರಕಾರ ರಕ್ಷಣೆ ಮಾಡುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ನಾಲ್ಕು ಲಕ್ಷ ಹೆಕ್ಟೇರ್ ಬರಡು ಭೂಮಿಯಿದೆ. ಖಾಲಿ ಗುಡ್ಡ ಪ್ರದೇಶಗಳಿವೆ. ಅರಣ್ಯ ಹೊರತುಪಡಿಸಿ ಸರಕಾರಿ ಜಾಗದಲ್ಲೂ ಅರಣ್ಯ ಬೆಳೆಸಲು ಅಧಿಕಾರಿಗಳು ಮುಂದಾಗಬೇಕು. ಅರಣ್ಯ ಇಲಾಖೆಯವರು ಮನಸ್ಸು ಮಾಡಿದರೆ, ಬೋಳು ಗುಡ್ಡದಲ್ಲಿ ಅರಣ್ಯ ಬೆಳೆಸುವುದು ಕಷ್ಟದ ಮಾತಲ್ಲ. ಜಮ್ಶೆಡ್ ಪುರದಲ್ಲಿ ಟಾಟಾ ಕಂಪನಿ ನಡೆಸುತ್ತಿದ್ದ ಕಬ್ಬಿಣ ಅದಿರು ಗಣಿಗಳಲ್ಲಿ ಅರಣ್ಯ ಬೆಳೆಸಲಾಗಿದೆ ಅಂದ್ರೆ, ಖಾಲಿ ಗುಡ್ಡದಲ್ಲಿ ನಮಗೆ ಸಸ್ಯ ಬೆಳೆಸಲಾಗದೇ, ವಿಲ್ ಪವರ್ ಇದ್ದಲ್ಲಿ ಯಾವುದನ್ನೂ ಸಾಧನೆ ಮಾಡಬಹುದು. ಅರಣ್ಯ ಹೆಚ್ಚಿಸಿದರೆ, ನಾವು ಮುಂದಿನ ಜನಾಂಗಕ್ಕೆ ಕೊಡುವ ಅತಿ ದೊಡ್ಡ ಗಿಫ್ಟ್ ಅದಾಗುತ್ತದೆ ಎಂದು ಹೇಳಿದರು.
ಒಂದು ಭಾಗದಲ್ಲಿ ಅರಣ್ಯ ಕಡಿದು ಪರಿಸರಕ್ಕೆ ಹಾನಿಯಾದಲ್ಲಿ ಅದೇ ವರ್ಷದಲ್ಲಿ ಪರ್ಯಾಯವಾಗಿ ಅರಣ್ಯ ಬೆಳೆಸುವ ಕಾರ್ಯ ಆಗಬೇಕು. ಇದಕ್ಕಾಗಿ ನಮ್ಮ ಸರಕಾರ ಮೊದಲ ಬಾರಿಗೆ ಪರಿಸರ ಕೇಂದ್ರಿತ ಬಜೆಟ್ ಘೋಷಣೆ ಮಾಡಿತ್ತು. ಅರಣ್ಯ ಬೆಳೆಸುವುದಕ್ಕಾಗಿಯೇ ಬಜೆಟ್ ನಲ್ಲಿ 100 ಕೋಟಿ ಮೀಸಲಿಟ್ಟಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.
The solatium amount granted to members of the deceased families of Forest Department Martyrs will be increased from the present Rs 30 lakh to Rs 50 lakh, Chief Minister Basavaraj Bommai announced in Bengaluru on Sunday.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm