ಬ್ರೇಕಿಂಗ್ ನ್ಯೂಸ್
12-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಬೆಂಗಳೂರಿನಲ್ಲಿ ಮಳೆಯಿಂದಾಗಿ ರಾಡಿ ಎದ್ದ ಬೆನ್ನಲ್ಲೇ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯೊಬ್ಬಳು ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಬಾಣಸವಾಡಿ ಬಳಿ ನಡೆದಿದೆ. ಎಚ್ಬಿಆರ್ ಲೇಔಟ್ ನಿವಾಸಿಯಾಗಿದ್ದ ನೇಪಾಳ ಮೂಲದ ತಾರಾ ಬಡಾಯಿಕ್(23) ಮೃತ ಯುವತಿ.
ಘಟನೆ ಸಂದರ್ಭದಲ್ಲಿ ಹಿಂಬದಿ ಸವಾರನಾಗಿದ್ದ ದಿಲೀಪ್(38) ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಶನಿವಾರ ತಡರಾತ್ರಿ 12.30ರ ಸುಮಾರಿಗೆ ಸಾರಾಯಿಪಾಳ್ಯ ಕಡೆಯಿಂದ ಹೆಣ್ಣೂರು ಕಡೆಗೆ ತೆರಳುತ್ತಿದ್ದಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ರಸ್ತೆ ಬದಿ ಇದ್ದ ಚರಂಡಿಗೆ ಬಿದ್ದಿದ್ದಾಳೆ. ಈ ವೇಳೆ, ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆ ಸೇರಿಸಲಾಗಿತ್ತು.
ನೇಪಾಳ ಮೂಲದ ತಾರಾ ಬಡಾಯಿಕ್ ಕೆಲವು ವರ್ಷಗಳಿಂದ ಬೆಂಗಳೂರಿನ ಎಚ್ಬಿಆರ್ ಲೇಔಟ್ ನಲ್ಲಿ ನೆಲೆಸಿದ್ದು, ಅಡುಗೆ ವೃತ್ತಿ ಮಾಡಿಕೊಂಡಿದ್ದಳು. ಶನಿವಾರ ರಾತ್ರಿ ತನ್ನ ಡಿಯೋ ಸ್ಕೂಟರಿನಲ್ಲಿ ಸ್ನೇಹಿತ ದಿಲೀಪ್ ನನ್ನು ಹಿಂಬದಿ ಕೂರಿಸಿಕೊಂಡು ಎಚ್ಬಿಆರ್ ಲೇಔಟ್ ಮುಖ್ಯರಸ್ತೆಯಲ್ಲಿ ಸಾರಾಯಿ ಪಾಳ್ಯ ಕಡೆಯಿಂದ ಹೆಣ್ಣೂರು ಕಡೆಗೆ ಹೊರಟ್ಟಿದ್ದಳು. ಮಾರ್ಗ ಮಧ್ಯೆ ಖಾಸಾ ಗ್ರ್ಯಾಂಡ್ ಬರಾಲಾ ಆಪಾರ್ಚ್ಮೆಂಟ್ ಬಳಿ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದೆ. ಈ ವೇಳೆ ತಾರಾ ಬಡಾಯಿಕ್ ತಲೆ ಹಾಗೂ ತೊಡೆಗೆ ಗಂಭೀರ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ತಾರಾ ಬಡಾಯಿಕ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ತನಿಖೆ ನಂತರ ಅಪಘಾತಕ್ಕೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The incident occurred around 12:30 am when the victim and her friend were on the way to HBR Layout.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm