ಬ್ರೇಕಿಂಗ್ ನ್ಯೂಸ್
15-09-22 12:01 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಆಯ್ಕೆ ಕುರಿತು ಸೆ.16 ರಂದು ಶುಕ್ರವಾರ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಂತರಿಕ ಚುನಾವಣೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಪುನರಾಯ್ಕೆ ಆಗಲಿದ್ದಾರೆ ಎನ್ನಲಾಗುತ್ತಿದೆ.
ಚುನಾವಣೆ ನಡೆದಲ್ಲಿ ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮಂದಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ಇದಾಗದಿದ್ದರೆ, ಎಐಸಿಸಿ ನೀಡುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನಿರ್ಣಯ ತೆಗೆದುಕೊಂಡು ಡಿ.ಕೆ.ಶಿವಕುಮಾರ್ ಅವರನ್ನೇ ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರೆಸುವ ಸಾಧ್ಯತೆಯೂ ಇರುತ್ತದೆ.
ಈ ಬಗ್ಗೆ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದು, ಕೆಪಿಸಿಸಿ ಸದಸ್ಯರೆಲ್ಲರೂ ಸೆ.16 ರಂದು ನಡೆಯಲಿರುವ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಮೂಲಗಳ ಪ್ರಕಾರ, ಸೆ.16 ರಂದು ಅವಿರೋಧವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ. ಒಂದು ವೇಳೆ ಅನಿರೀಕ್ಷಿತ ಬೆಳವಣಿಗೆಗಳು ನಡೆದು ಬೇರೆ ಯಾರಾದರೂ ಸ್ಪರ್ಧೆಗೆ ಆಸಕ್ತಿ ತೋರಿದರೆ ಮಾತ್ರ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಚುನಾವಣೆ ನಡೆಸದೆ ಅಧ್ಯಕ್ಷರ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರ್ಣಗೊಂಡಿದೆ. ಕಾಂಗ್ರೆಸ್ ಬೈಲಾ ಪ್ರಕಾರ, ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಬೇಕು. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ಗೆ ಆಸಕ್ತಿ ಇಲ್ಲ. ಹೀಗಾಗಿ ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
The election for the post of Karnataka Pradesh Congress Committee President (KPCC) will be held on September 16, chief of the party's state unit, D K Shivakumar said on Monday.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm