ಬ್ರೇಕಿಂಗ್ ನ್ಯೂಸ್
15-09-22 12:01 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಆಯ್ಕೆ ಕುರಿತು ಸೆ.16 ರಂದು ಶುಕ್ರವಾರ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಂತರಿಕ ಚುನಾವಣೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಪುನರಾಯ್ಕೆ ಆಗಲಿದ್ದಾರೆ ಎನ್ನಲಾಗುತ್ತಿದೆ.
ಚುನಾವಣೆ ನಡೆದಲ್ಲಿ ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮಂದಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ಇದಾಗದಿದ್ದರೆ, ಎಐಸಿಸಿ ನೀಡುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನಿರ್ಣಯ ತೆಗೆದುಕೊಂಡು ಡಿ.ಕೆ.ಶಿವಕುಮಾರ್ ಅವರನ್ನೇ ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರೆಸುವ ಸಾಧ್ಯತೆಯೂ ಇರುತ್ತದೆ.
ಈ ಬಗ್ಗೆ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದು, ಕೆಪಿಸಿಸಿ ಸದಸ್ಯರೆಲ್ಲರೂ ಸೆ.16 ರಂದು ನಡೆಯಲಿರುವ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಮೂಲಗಳ ಪ್ರಕಾರ, ಸೆ.16 ರಂದು ಅವಿರೋಧವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ. ಒಂದು ವೇಳೆ ಅನಿರೀಕ್ಷಿತ ಬೆಳವಣಿಗೆಗಳು ನಡೆದು ಬೇರೆ ಯಾರಾದರೂ ಸ್ಪರ್ಧೆಗೆ ಆಸಕ್ತಿ ತೋರಿದರೆ ಮಾತ್ರ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಚುನಾವಣೆ ನಡೆಸದೆ ಅಧ್ಯಕ್ಷರ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರ್ಣಗೊಂಡಿದೆ. ಕಾಂಗ್ರೆಸ್ ಬೈಲಾ ಪ್ರಕಾರ, ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಬೇಕು. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ಗೆ ಆಸಕ್ತಿ ಇಲ್ಲ. ಹೀಗಾಗಿ ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
The election for the post of Karnataka Pradesh Congress Committee President (KPCC) will be held on September 16, chief of the party's state unit, D K Shivakumar said on Monday.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm