ಬ್ರೇಕಿಂಗ್ ನ್ಯೂಸ್
15-09-22 02:35 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ದುರಂತ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಮೂವರು ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ, ಆರೋಗ್ಯ ಮತ್ತು ವೈದ್ಯಕೀಯ ಸಚಿವರೇ ಜವಾಬ್ದಾರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡ ಪರಿಣಾಮ ನಿನ್ನೆ ರಾತ್ರಿ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಜನರೇಟರ್ ಕಾರ್ಯ ನಿರ್ವಹಿಸಿಲ್ಲ. ಹಾಗಾಗಿ ವೆಂಟಿಲೇಟರ್ ಸಮಸ್ಯೆಯಾಗಿದೆ. ಐಸಿಯುನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರೇ ನೇರ ಜವಾಬ್ದಾರಿ. ಸರ್ಕಾರದ ಬೇಜವಾಬ್ದಾರಿಯಿಂದಾಗಿಯೇ ಈ ದುರಂತ ಸಂಭವಿಸಿದೆ. ಘಟನೆ ಹೊಣೆ ಹೊತ್ತು ಮೊದಲು ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.



ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಮಾಧುಸ್ವಾಮಿ ಹಾಗೂ ಶ್ರೀರಾಮುಲು, ಸರ್ಕಾರ ಹೇಗೆ ಜವಾಬ್ದಾರಿಯಾಗಲು ಸಾಧ್ಯ? ನಿಮ್ಮ ಕಾಲದಲ್ಲಿ ನಡೆದ ರೋಗಿಗಳ ಸಾವಿಗೆ ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂದು ಪ್ರಶ್ನಿಸಿದರು. ವಿದ್ಯುತ್ ಸಮಸ್ಯೆಯಿಂದ ರೋಗಿಗಳು ಸಾವನ್ನಪ್ಪಿಲ್ಲ ಎಂದು ಸಮಜಾಯಿಷಿ ನೀಡಿದರು. ಇದಕ್ಕೆ ಕೆಂಡಾಮಂಡಲರಾದ ಸಿದ್ದರಾಮಯ್ಯ, ಕರೆಂಟ್ ಹೋಗಿದ್ದರಿಂದ ಜನರೇಟರ್ ಕೂಡ ಕಾರ್ಯ ನಿರ್ವಹಿಸಿಲ್ಲ. ಇದರಿಂದಾಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಸಾಧ್ಯವಾಗಿಲ್ಲ. ಸಾವಿನ ಜೊತೆ ಚೆಲ್ಲಾಟವಾಡುತ್ತಿದ್ದೀರಾ? ಮೊದಲು ತಪ್ಪನ್ನು ಒಪ್ಪಿಕೊಳ್ಳಿ ಎಂದು ಗುಡುಗಿದರು. ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.
Two patients admitted to the Intensive Care Unit (ICU) of Vijayanagar Institute of Medical Sciences (VIMS) in Karnataka’s Ballari died Wednesday, reportedly after a power cut in the hospital.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm