ಬ್ರೇಕಿಂಗ್ ನ್ಯೂಸ್
08-10-20 01:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 08: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ರಾತ್ರಿ 7.40ರ ಸುಮಾರಿಗೆ ಘಟನೆ ನಡೆದಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಸಹ ಪ್ರಯಾಣಿಕರಾಗಿದ್ದ ಗೈನಕಾಲಜಿಸ್ಟ್ ವೈದ್ಯರೊಬ್ಬರು ಮತ್ತು ಜೊತೆಗಿದ್ದ ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ್ದಾರೆ.


ಮಹಿಳೆಗೆ 9 ತಿಂಗಳು ಪೂರ್ತಿಯಾಗಿರಲಿಲ್ಲ. ಆದರೆ, ಹೆರಿಗೆ ಹತ್ತಿರ ಬಂದಿರುವ ವೇಳೆ ಗರ್ಭಿಣಿಯರನ್ನು ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡುವುದಿಲ್ಲ. ವಿಮಾನ ನಿಲ್ದಾಣದ ಅಧಿಕಾರಿಗಳು ಇಲ್ಲಿ ಹೇಗೆ ಅವಕಾಶ ನೀಡಿದ್ದಾರೆ ಎಂದು ವೈದ್ಯರು ಪ್ರಶ್ನೆ ಮಾಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯದಲ್ಲಿದ್ದು, 8 ಗಂಟೆ ಸುಮಾರಿಗೆ ವಿಮಾನ ಬೆಂಗಳೂರು ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ತಾಯಿ, ಮಗುವನ್ನು ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಮಾನ ಪ್ರಯಾಣ ಸಂದರ್ಭದಲ್ಲಿನ ಏರಿಳಿತದಿಂದಾಗಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.
ವಿಮಾನದಲ್ಲಿ ಹೆರಿಗೆಯಾಗಿದ್ದರಿಂದ ಮಗುವಿಗೆ ಉಚಿತ ಪ್ರಯಾಣದ ಸೌಲಭ್ಯ ಸಿಕ್ಕಿದೆ. ಹೀಗಾಗಿ ಆ ಮಗುವಿಗೆ ಜೀವಮಾನ ಪೂರ್ತಿ ಉಚಿತ ವಿಮಾನ ಪ್ರಯಾಣದ ಅವಕಾಶ ನೀಡಬೇಕೆಂದು ಜಾಲತಾಣದಲ್ಲಿ ಕೆಲವರು ಟ್ವೀಟ್ ಮಾಡಿದ್ದಾರೆ. ಹಿಂದೊಮ್ಮೆ ಎರಡು ಬಾರಿ ಇಂತಹ ನಿದರ್ಶನ ಆಗಿತ್ತು. 2017ರಲ್ಲಿ ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿದ್ದ ಜೆಟ್ ಏರ್ವೇಸ್ ವಿಮಾನದಲ್ಲಿ ಮಹಿಳೆಗೆ ಹೆರಿಗೆ ಆಗಿತ್ತು. ಆ ಸಂದರ್ಭದಲ್ಲಿ ಜೆಟ್ ಏರ್ವೇಸ್ ವಿಮಾನ ಕಂಪೆನಿ, ಮಗುವಿನ ಜೀವಮಾನ ಪೂರ್ತಿ ಉಚಿತ ಪ್ರಯಾಣದ ಆಫರ್ ನೀಡಿತ್ತು. 20009ರಲ್ಲಿ ಏರ್ ಏಶ್ಯಾ ವಿಮಾನ ಕಂಪೆನಿ, ಮಲೇಶ್ಯಾದ ಮಹಿಳೆಯೊಬ್ಬಳು ಹೆರಿಗೆಯಾದ ಸಂದರ್ಭದಲ್ಲಿ ಮಗುವಿಗೆ ಇಂಥದ್ದೇ ಆಫರ್ ನೀಡಿತ್ತು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
31-05-26 02:24 pm
HK News Staffer
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm