ಬ್ರೇಕಿಂಗ್ ನ್ಯೂಸ್
08-10-20 01:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 08: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ರಾತ್ರಿ 7.40ರ ಸುಮಾರಿಗೆ ಘಟನೆ ನಡೆದಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಸಹ ಪ್ರಯಾಣಿಕರಾಗಿದ್ದ ಗೈನಕಾಲಜಿಸ್ಟ್ ವೈದ್ಯರೊಬ್ಬರು ಮತ್ತು ಜೊತೆಗಿದ್ದ ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ್ದಾರೆ.


ಮಹಿಳೆಗೆ 9 ತಿಂಗಳು ಪೂರ್ತಿಯಾಗಿರಲಿಲ್ಲ. ಆದರೆ, ಹೆರಿಗೆ ಹತ್ತಿರ ಬಂದಿರುವ ವೇಳೆ ಗರ್ಭಿಣಿಯರನ್ನು ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡುವುದಿಲ್ಲ. ವಿಮಾನ ನಿಲ್ದಾಣದ ಅಧಿಕಾರಿಗಳು ಇಲ್ಲಿ ಹೇಗೆ ಅವಕಾಶ ನೀಡಿದ್ದಾರೆ ಎಂದು ವೈದ್ಯರು ಪ್ರಶ್ನೆ ಮಾಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯದಲ್ಲಿದ್ದು, 8 ಗಂಟೆ ಸುಮಾರಿಗೆ ವಿಮಾನ ಬೆಂಗಳೂರು ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ತಾಯಿ, ಮಗುವನ್ನು ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಮಾನ ಪ್ರಯಾಣ ಸಂದರ್ಭದಲ್ಲಿನ ಏರಿಳಿತದಿಂದಾಗಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.
ವಿಮಾನದಲ್ಲಿ ಹೆರಿಗೆಯಾಗಿದ್ದರಿಂದ ಮಗುವಿಗೆ ಉಚಿತ ಪ್ರಯಾಣದ ಸೌಲಭ್ಯ ಸಿಕ್ಕಿದೆ. ಹೀಗಾಗಿ ಆ ಮಗುವಿಗೆ ಜೀವಮಾನ ಪೂರ್ತಿ ಉಚಿತ ವಿಮಾನ ಪ್ರಯಾಣದ ಅವಕಾಶ ನೀಡಬೇಕೆಂದು ಜಾಲತಾಣದಲ್ಲಿ ಕೆಲವರು ಟ್ವೀಟ್ ಮಾಡಿದ್ದಾರೆ. ಹಿಂದೊಮ್ಮೆ ಎರಡು ಬಾರಿ ಇಂತಹ ನಿದರ್ಶನ ಆಗಿತ್ತು. 2017ರಲ್ಲಿ ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿದ್ದ ಜೆಟ್ ಏರ್ವೇಸ್ ವಿಮಾನದಲ್ಲಿ ಮಹಿಳೆಗೆ ಹೆರಿಗೆ ಆಗಿತ್ತು. ಆ ಸಂದರ್ಭದಲ್ಲಿ ಜೆಟ್ ಏರ್ವೇಸ್ ವಿಮಾನ ಕಂಪೆನಿ, ಮಗುವಿನ ಜೀವಮಾನ ಪೂರ್ತಿ ಉಚಿತ ಪ್ರಯಾಣದ ಆಫರ್ ನೀಡಿತ್ತು. 20009ರಲ್ಲಿ ಏರ್ ಏಶ್ಯಾ ವಿಮಾನ ಕಂಪೆನಿ, ಮಲೇಶ್ಯಾದ ಮಹಿಳೆಯೊಬ್ಬಳು ಹೆರಿಗೆಯಾದ ಸಂದರ್ಭದಲ್ಲಿ ಮಗುವಿಗೆ ಇಂಥದ್ದೇ ಆಫರ್ ನೀಡಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm