ಬ್ರೇಕಿಂಗ್ ನ್ಯೂಸ್
15-09-22 09:31 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಧ್ವನಿ ಮತದ ಮೂಲಕ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ವಿಧಾನ ಪರಿಷತ್ ನಲ್ಲಿ ಅಂಗೀಕಾರ ಮಾಡಲಾಗಿದೆ.
ಆದರೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಕಾಯ್ದೆಯ ಪ್ರತಿಗಳನ್ನು ಹರಿದು ಹಾಕುವ ಮೂಲಕ ಆಕ್ರೋಶ ತೋರಿದರಲ್ಲದೆ, ಅಧಿವೇಶನದಿಂದ ಸಭಾತ್ಯಾಗ ಮಾಡಿ ಹೊರನಡೆದರು. ಈ ವೇಳೆ ಬಿಜೆಪಿ ಸದಸ್ಯರು ಭಾರತ್ ಮಾತಾಕೀ ಜೈ, ಹಿಂದೂ ವಿರೋಧಿ, ದೇಶದ್ರೋಹಿ ಕಾಂಗ್ರೆಸ್ ಗೆ ಧಿಕ್ಕಾರ ಎಂದು ಕೂಗಿದರು. ಗದ್ದಲದ ಮಧ್ಯೆ ಕಲಾಪವನ್ನು ಸಭಾಪತಿ ನಾಳೆಗೆ ಮುಂದೂಡಿದರು.

ಮಸೂದೆಯ ಬಿಲ್ ಪ್ರತಿಯನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಜನವಿರೋಧಿ ಸರಕಾರ ಎಂದು ಹರಿಹಾಯ್ದಿದ್ದಾರೆ.
ಮಸೂದೆ ಪ್ರಕಾರ, ಬಲವಂತ, ಆಮಿಷ ಮತ್ತು ಮದುವೆಯಾಗುವ ಭರವಸೆ ನೀಡಿ ನಡೆಸುವ ಮತಾಂತರ ಕಾರ್ಯಕ್ಕೆ ನಿಷೇಧವಿದೆ. ಮತಾಂತರಗೊಂಡ ವ್ಯಕ್ತಿಯ ಮನೆಯವರು ಅಥವಾ ಆಪ್ತರು ಪೊಲೀಸ್ ದೂರು ನೀಡಿದರೆ ಎಫ್ಐಆರ್ ದಾಖಲಾಗುವುದು. ಬಲವಂತದ ಮತಾಂತರಕ್ಕೆ ಮೂರರಿಂದ ಐದು ವರ್ಷ ಜೈಲು ಶಿಕ್ಷೆ ಮತ್ತು 25,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೆ, ಕಾನೂನು ಪ್ರಕಾರ ಮತಾಂತರ ಆಗುವುದಿದ್ದರೂ ವ್ಯಕ್ತಿ ಎರಡು ತಿಂಗಳ ಮೊದಲೇ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗೆ ತಿಳಿಸಬೇಕು. ಈ ಮಾಹಿತಿಯನ್ನು ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. 30 ದಿನಗಳ ಒಳಗೆ ಆಕ್ಷೇಪಣೆ ಬಂದರೆ ಕಂದಾಯ ಇಲಾಖೆಯಿಂದ ವಿಚಾರಣೆ ನಡೆಸಬೇಕು. ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ.
ಕಳೆದ ಬೆಳಗಾವಿ ಅಧಿವೇಶನದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗಿತ್ತು. ಆನಂತರ, ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಆದರೆ ವಿಧಾನ ಪರಿಷತ್ ನಲ್ಲಿ ಅಂಗೀಕಾರ ಆಗಿರಲಿಲ್ಲ. ಇಂದು ವಿಪಕ್ಷಗಳ ವಿರೋಧ ನಡುವೆಯೂ ಧ್ವನಿಮತದಿಂದ ಅನುಮತಿಸಿ, ಮಸೂದೆಗೆ ಅಂಗೀಕಾರ ನೀಡಲಾಗಿದೆ.
The bill was tabled in the upper House earlier in the day by home minister Araga Jnanendra. The bill was earlier passed in the Assembly in December, last year, but was not presented in the council due to the lack of majority. Pending passage in the upper House, the Basavaraj Bommai-led BJP dispensation had subsequently promulgated an ordinance in May this year to give effect to the bill.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm