ಬ್ರೇಕಿಂಗ್ ನ್ಯೂಸ್
            
                        08-10-20 04:02 pm Mysore Correspondent ಕರ್ನಾಟಕ
            ಮೈಸೂರು, ಅಕ್ಟೋಬರ್ 08: 1960ರ ವೇಳೆಗೆ ಆಹಾರಕ್ಕಾಗಿ ನಮ್ಮ ದೇಶ ಇತರರ ಬಳಿ ಭಿಕ್ಷೆ ಬೇಡುವ ಸ್ಥಿತಿ ಇತ್ತು. ಈಗ ಇಡೀ ಜಗತ್ತಿಗೆ ಆಹಾರ ಪೂರೈಸುವ ಶಕ್ತಿ ಹೊಂದಿದ್ದೇವೆ. ಆದರೆ, ಕಾಂಗ್ರೆಸ್ನವರು ಮಾತ್ರ ರೈತರ ಹಾದಿ ತಪ್ಪಿಸಿ ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
‘ಇದೇ ವಿಚಾರವನ್ನು ಹಿಂದೆ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯಲ್ಲಿ ಅಳವಡಿಸಿತ್ತು. ಈಗ ಮಾತ್ರ ಟೀಕಿಸುತ್ತಿದ್ದಾರೆ. ಕಾಂಗ್ರೆಸ್ ದ್ವಂದ್ವದ ಬಗ್ಗೆ ಮತ್ತು ಮಸೂದೆಯ ಲಾಭದ ಬಗ್ಗೆ ಪ್ರತಿ ರೈತನ ಮನೆಗೆ ತೆರಳಿ ಹೇಳುತ್ತೇವೆ. ಕೃಷಿ ಮಸೂದೆಗಳ ಉದ್ದೇಶ ತಿಳಿಸಿಕೊಡಲಿದ್ದೇವೆ. ರೈತ ಮುಖಂಡರು ಚರ್ಚೆಗೆ ಬಂದರೂ ಸಿದ್ಧ ಎಂದು ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿದ್ದ ವೇಳೆ 49 ಕಾರ್ಪೊರೇಟ್ ಕಂಪನಿಗಳಿಗೆ ಪರವಾನಗಿ ಕೊಟ್ಟಿದ್ದರು. ವಿವಿಧ ಸ್ವರೂಪದಲ್ಲಿ ಲಾಭ ಮಾಡಿಕೊಟ್ಟಿದ್ದರು. ಈಗ ನಮ್ಮ ನಿಲುವನ್ನು ಪ್ರಶ್ನಿಸುತ್ತಿದ್ದಾರೆ. ಕೊಳಕಿನಲ್ಲಿ ಮಲಗಿದ ಕೋಣನಿಗೆ ಒಂದು ಏಟು ಬಿದ್ದರೆ ಎಲ್ಲೋ ಪೆಟ್ಟು ಬಿದ್ದ ರೀತಿ ಕೇಳುತ್ತದೆ. ಎರಡು ಮತ್ತು ಮೂರನೇ ಏಟು ಬಿದ್ದಾಗ ಚೂರು ಎಚ್ಚರ ಆಗುತ್ತದೆ. ನಾಲ್ಕನೇ ಏಟು ಬಿದ್ದಾಗ ತನಗೇ ಪೆಟ್ಟು ಬಿದ್ದಿರುವುದೆಂದು ಅರಿವಿಗೆ ಬರುತ್ತದೆ. ಕಾಂಗ್ರೆಸ್ನವರಿಗೆ ಈಗ ನಾಲ್ಕನೇ ಏಟು ಬಿದ್ದಿದೆ. ಈಗಷ್ಟೇ ಎಚ್ಚೆತ್ತುಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಹಿಂದೆ ನಮಗೆ ಬೇಕಾದಷ್ಟು ಆಹಾರ ದೇಶದಲ್ಲಿ ಸಿಗುತ್ತಿರಲಿಲ್ಲ. ಇಷ್ಟಾದರೂ ಕಾಂಗ್ರೆಸ್ನವರು ಪರ್ಯಾಯ ಹುಡುಕಲಿಲ್ಲ. ಕಾನೂನಿನ ಅಂಶಕ್ಕೆ ತಿದ್ದುಪಡಿಯನ್ನೂ ತಂದಿರಲಿಲ್ಲ. 1990ರ ಉದಾರೀಕರಣ ಜಾರಿಗೆ ತಂದಾಗಲೂ ರೈತರಿಗೆ ನೆರವು ಸಿಗಲಿಲ್ಲ. ಈಗ ಕೃಷಿ ಮಸೂದೆಗಳನ್ನು ಪರಿವರ್ತಿಸಿ, ರೈತರಿಗೆ ಸ್ವಾಭಿಮಾನ ನೀಡುವ ಮಸೂದೆ ತಂದಿದ್ದೇವೆ ಎಂದು ಕೃಷಿ ಮಸೂದೆಗಳ ಪರವಾಗಿ ಬ್ಯಾಟಿಂಗ್ ಮಾಡಿದರು.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm