ಬ್ರೇಕಿಂಗ್ ನ್ಯೂಸ್
08-10-20 04:02 pm Mysore Correspondent ಕರ್ನಾಟಕ
ಮೈಸೂರು, ಅಕ್ಟೋಬರ್ 08: 1960ರ ವೇಳೆಗೆ ಆಹಾರಕ್ಕಾಗಿ ನಮ್ಮ ದೇಶ ಇತರರ ಬಳಿ ಭಿಕ್ಷೆ ಬೇಡುವ ಸ್ಥಿತಿ ಇತ್ತು. ಈಗ ಇಡೀ ಜಗತ್ತಿಗೆ ಆಹಾರ ಪೂರೈಸುವ ಶಕ್ತಿ ಹೊಂದಿದ್ದೇವೆ. ಆದರೆ, ಕಾಂಗ್ರೆಸ್ನವರು ಮಾತ್ರ ರೈತರ ಹಾದಿ ತಪ್ಪಿಸಿ ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
‘ಇದೇ ವಿಚಾರವನ್ನು ಹಿಂದೆ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯಲ್ಲಿ ಅಳವಡಿಸಿತ್ತು. ಈಗ ಮಾತ್ರ ಟೀಕಿಸುತ್ತಿದ್ದಾರೆ. ಕಾಂಗ್ರೆಸ್ ದ್ವಂದ್ವದ ಬಗ್ಗೆ ಮತ್ತು ಮಸೂದೆಯ ಲಾಭದ ಬಗ್ಗೆ ಪ್ರತಿ ರೈತನ ಮನೆಗೆ ತೆರಳಿ ಹೇಳುತ್ತೇವೆ. ಕೃಷಿ ಮಸೂದೆಗಳ ಉದ್ದೇಶ ತಿಳಿಸಿಕೊಡಲಿದ್ದೇವೆ. ರೈತ ಮುಖಂಡರು ಚರ್ಚೆಗೆ ಬಂದರೂ ಸಿದ್ಧ ಎಂದು ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿದ್ದ ವೇಳೆ 49 ಕಾರ್ಪೊರೇಟ್ ಕಂಪನಿಗಳಿಗೆ ಪರವಾನಗಿ ಕೊಟ್ಟಿದ್ದರು. ವಿವಿಧ ಸ್ವರೂಪದಲ್ಲಿ ಲಾಭ ಮಾಡಿಕೊಟ್ಟಿದ್ದರು. ಈಗ ನಮ್ಮ ನಿಲುವನ್ನು ಪ್ರಶ್ನಿಸುತ್ತಿದ್ದಾರೆ. ಕೊಳಕಿನಲ್ಲಿ ಮಲಗಿದ ಕೋಣನಿಗೆ ಒಂದು ಏಟು ಬಿದ್ದರೆ ಎಲ್ಲೋ ಪೆಟ್ಟು ಬಿದ್ದ ರೀತಿ ಕೇಳುತ್ತದೆ. ಎರಡು ಮತ್ತು ಮೂರನೇ ಏಟು ಬಿದ್ದಾಗ ಚೂರು ಎಚ್ಚರ ಆಗುತ್ತದೆ. ನಾಲ್ಕನೇ ಏಟು ಬಿದ್ದಾಗ ತನಗೇ ಪೆಟ್ಟು ಬಿದ್ದಿರುವುದೆಂದು ಅರಿವಿಗೆ ಬರುತ್ತದೆ. ಕಾಂಗ್ರೆಸ್ನವರಿಗೆ ಈಗ ನಾಲ್ಕನೇ ಏಟು ಬಿದ್ದಿದೆ. ಈಗಷ್ಟೇ ಎಚ್ಚೆತ್ತುಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಹಿಂದೆ ನಮಗೆ ಬೇಕಾದಷ್ಟು ಆಹಾರ ದೇಶದಲ್ಲಿ ಸಿಗುತ್ತಿರಲಿಲ್ಲ. ಇಷ್ಟಾದರೂ ಕಾಂಗ್ರೆಸ್ನವರು ಪರ್ಯಾಯ ಹುಡುಕಲಿಲ್ಲ. ಕಾನೂನಿನ ಅಂಶಕ್ಕೆ ತಿದ್ದುಪಡಿಯನ್ನೂ ತಂದಿರಲಿಲ್ಲ. 1990ರ ಉದಾರೀಕರಣ ಜಾರಿಗೆ ತಂದಾಗಲೂ ರೈತರಿಗೆ ನೆರವು ಸಿಗಲಿಲ್ಲ. ಈಗ ಕೃಷಿ ಮಸೂದೆಗಳನ್ನು ಪರಿವರ್ತಿಸಿ, ರೈತರಿಗೆ ಸ್ವಾಭಿಮಾನ ನೀಡುವ ಮಸೂದೆ ತಂದಿದ್ದೇವೆ ಎಂದು ಕೃಷಿ ಮಸೂದೆಗಳ ಪರವಾಗಿ ಬ್ಯಾಟಿಂಗ್ ಮಾಡಿದರು.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm