ಬ್ರೇಕಿಂಗ್ ನ್ಯೂಸ್
18-09-22 12:10 pm HK News Desk ಕರ್ನಾಟಕ
ಮಂಡ್ಯ, ಸೆ.17 : ನವಜಾತ ಶಿಶುವೊಂದು ಪಾಳು ಬಾವಿಯಲ್ಲಿ ಪತ್ತೆಯಾಗಿದ್ದು 30 ಅಡಿ ಆಳದ ಬಾವಿಗೆ ಬಿದ್ದರೂ ಪವಾಡ ಸದೃಶ ಬದುಕುಳಿದ ಘಟನೆ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.
ರಸ್ತೆ ಬದಿಯ ಪಾಳುಬಾವಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿ ರೈತ ಮಹಿಳೆಯರು ಬಂದು ಇಣುಕಿದಾಗ ಬಾವಿಯಲ್ಲಿ ಮಗು ಕಂಡುಬಂದಿದೆ. ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಗುವನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಸ ಕಡ್ಡಿಯೇ ತುಂಬಿದ್ದ ಪಾಳುಬಾವಿಯಲ್ಲಿ ಬಿದ್ದಿದ್ದರೂ ಪವಾಡ ಸದೃಶ ರೀತಿಯಲ್ಲಿ ಶಿಶು ಬದುಕುಳಿದಿದೆ. ಆಗ ತಾನೇ ಜನಿಸಿರುವ ಗಂಡು ಮಗು ಇದಾಗಿದ್ದು ಅದನ್ನು ಪಾಳು ಬಾವಿಗೆ ಎಸೆದವರು ಯಾರು ಎಂಬ ಬಗ್ಗೆ ತನಿಖೆ ಆರಂಭಗೊಂಡಿದೆ. ಶಿಶುವಿನ ಮುಖ ಮತ್ತು ದೇಹದ ಕೆಲವು ಭಾಗಗಳಲ್ಲಿ ಇರುವೆ ಕಚ್ಚಿರುವ ಗುರುತುಗಳಿವೆ. ಬಾವಿಯಲ್ಲಿ ಪ್ಲಾಸ್ಟಿಕ್, ಪೇಪರ್ ಇನ್ನಿತರ ಕಸಗಳನ್ನು ಎಸೆಯಲಾಗಿದ್ದು ಹೀಗಾಗಿ ಕೆಳಕ್ಕೆ ಬಿದ್ದ ಮಗುವಿಗೆ ಹೆಚ್ಚೇನು ಗಾಯಗಳಾಗದೆ ಬದುಕುಳಿದಿದೆ. ಬೆಳಗ್ಗಿನ ಹೊತ್ತಿಗೆ ಮಗುವನ್ನು ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೃತ್ಯ ಎಸಗಿದವರ ಬಗ್ಗೆ ಹುಡುಕಾಟ ನಡೆದಿದೆ.
Newborn baby thrown into 30 feet well in Mandya, luckily survives.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm