ಬ್ರೇಕಿಂಗ್ ನ್ಯೂಸ್
18-09-22 12:10 pm HK News Desk ಕರ್ನಾಟಕ
ಮಂಡ್ಯ, ಸೆ.17 : ನವಜಾತ ಶಿಶುವೊಂದು ಪಾಳು ಬಾವಿಯಲ್ಲಿ ಪತ್ತೆಯಾಗಿದ್ದು 30 ಅಡಿ ಆಳದ ಬಾವಿಗೆ ಬಿದ್ದರೂ ಪವಾಡ ಸದೃಶ ಬದುಕುಳಿದ ಘಟನೆ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.
ರಸ್ತೆ ಬದಿಯ ಪಾಳುಬಾವಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿ ರೈತ ಮಹಿಳೆಯರು ಬಂದು ಇಣುಕಿದಾಗ ಬಾವಿಯಲ್ಲಿ ಮಗು ಕಂಡುಬಂದಿದೆ. ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಗುವನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಸ ಕಡ್ಡಿಯೇ ತುಂಬಿದ್ದ ಪಾಳುಬಾವಿಯಲ್ಲಿ ಬಿದ್ದಿದ್ದರೂ ಪವಾಡ ಸದೃಶ ರೀತಿಯಲ್ಲಿ ಶಿಶು ಬದುಕುಳಿದಿದೆ. ಆಗ ತಾನೇ ಜನಿಸಿರುವ ಗಂಡು ಮಗು ಇದಾಗಿದ್ದು ಅದನ್ನು ಪಾಳು ಬಾವಿಗೆ ಎಸೆದವರು ಯಾರು ಎಂಬ ಬಗ್ಗೆ ತನಿಖೆ ಆರಂಭಗೊಂಡಿದೆ. ಶಿಶುವಿನ ಮುಖ ಮತ್ತು ದೇಹದ ಕೆಲವು ಭಾಗಗಳಲ್ಲಿ ಇರುವೆ ಕಚ್ಚಿರುವ ಗುರುತುಗಳಿವೆ. ಬಾವಿಯಲ್ಲಿ ಪ್ಲಾಸ್ಟಿಕ್, ಪೇಪರ್ ಇನ್ನಿತರ ಕಸಗಳನ್ನು ಎಸೆಯಲಾಗಿದ್ದು ಹೀಗಾಗಿ ಕೆಳಕ್ಕೆ ಬಿದ್ದ ಮಗುವಿಗೆ ಹೆಚ್ಚೇನು ಗಾಯಗಳಾಗದೆ ಬದುಕುಳಿದಿದೆ. ಬೆಳಗ್ಗಿನ ಹೊತ್ತಿಗೆ ಮಗುವನ್ನು ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೃತ್ಯ ಎಸಗಿದವರ ಬಗ್ಗೆ ಹುಡುಕಾಟ ನಡೆದಿದೆ.
Newborn baby thrown into 30 feet well in Mandya, luckily survives.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm