ಬ್ರೇಕಿಂಗ್ ನ್ಯೂಸ್
20-09-22 10:53 pm HK News Desk ಕರ್ನಾಟಕ
ಹಾವೇರಿ, ಸೆ.20 : ಎರಡು ಮೂರು ದಿನಗಳಿಂದ ಸ್ವಾಮೀಜಿಗೆ ಧಮ್ಕಿ ಬರ್ತಾ ಇತ್ತು. ಶಿಗ್ಗಾಂವ್ ನಲ್ಲಿ ಸಭೆ ಮಾಡಿಸಲು ಬಿಡಲ್ಲ ಅಂತಾ ಹೇಳಿದ್ರು. ಶಿಗ್ಗಾಂವ್ ಏನು ಪಾಕಿಸ್ತಾನ ಐತೇನು? ಎಂದು ಬಸವನಗೌಡ ಪಾಟೀಲ್ ಯತ್ನಾಳ ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಗುಡುಗಿದ್ದಾರೆ.
ಶಿಗ್ಗಾಂವಿಯ ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಮುಂದೆ ಬೆಳಗ್ಗಿನಿಂದ ಸಂಜೆಯ ವರೆಗೂ ಪಂಚಮಸಾಲಿ ವೀರಶೈವ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ಕೊನೆಯಲ್ಲಿ ವಿಧಾನಸಭೆ ಅಧಿವೇಶನದಿಂದಲೇ ಸ್ಥಳಕ್ಕೆ ಆಗಮಿಸಿದ ಯತ್ನಾಳ ವೀರಾವೇಶದಿಂದ ಮಾತನಾಡಿದ್ದಾರೆ. ಯಡಿಯೂರಪ್ಪ ಹೆಸರೆತ್ತದೆ ಅಪ್ಪ ಮಕ್ಕಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಜಾಪುರದಾಗ ಕೈಯಾಡಸಾಕ ಬರ್ತಾನ್. ಕೋಟಿಗಟ್ಟಲೆ ರೊಕ್ಕ ಮಾಡ್ಯಾರು, ಲೂಟಿ ಮಾಡಿದ್ದಾರೆ. ನಿನ್ನ ಮಗನಿಗೆ ಟಿಕೆಟ್ ಸಿಗತೈತೋ ಇಲ್ಲೋ ಗೊತ್ತಿಲ್ಲ. ನಾವು ಮಾತ್ರ ಬಿಡೋದಿಲ್ಲ. ಬೊಮ್ಮಾಯಿ ಅವರದ್ದು ತಪ್ಪೇನಿಲ್ಲ. ನಿಮ್ಮ ಕುರ್ಚಿ ಅಲ್ಲಾಡಿಸುವುದಿಲ್ಲ. ಕೊನೆಯ ಬ್ರಹ್ಮಾಸ್ತ್ರ ನನ್ನ ಬಳಿ ಇದೆ, ಅದು ಬೆಂಗಳೂರು ಚಲೋ
ಲಾಸ್ಟ್ ಹೋರಾಟ ಅದು. ಸರಕಾರ ಮಣಿಯದಿದ್ದರೆ ಅದನ್ನು ಮಾಡಿಯೇ ತೀರುತ್ತೇವೆ ಎಂದು ಯತ್ನಾಳ ಹೇಳಿದರು.

ಇವತ್ತು ವಿಧಾನ ಸಭೆಯಲ್ಲಿ ಚರ್ಚೆಯಾಗಿದೆ. ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ನನಗೆ ವಿಶ್ವಾಸವಿದೆ ನವೆಂಬರ್ ಒಳಗೆ ಸರಕಾರ ಮೀಸಲಾತಿ ವಿಚಾರದಲ್ಲಿ ನಿರ್ಣಯ ಮಾಡ್ತದೆ. ಇಲ್ಲದೇ ಇದ್ದರೆ ಬೆಂಗಳೂರಿನ ಹೋರಾಟದಲ್ಲಿ ಮುಂದಿನ ನಿರ್ಣಯ ಮಾಡೋಣ. ಗುರುಗಳ ಬಗ್ಗೆ, ನಮ್ಮ ಬಗ್ಗೆ ಸಂಶಯ ಇತ್ತು ನಿಮಗೆ. ನನಗೆ ಆಸೆ ಹಚ್ವಿದ್ದಾರೆ, ನಾವು ಆಶೆಗೆ ಹೋಗುವುದಿಲ್ಲ. ನನಗೆ ಮಂತ್ರಿಯಾಗುವ ಆಸೆ ಇಲ್ಲ. ಆದರೆ ಸಮಾಜಕ್ಕೆ ದ್ರೋಹ ಮಾಡಬಾರದು ಎನ್ನುವ ಗಟ್ಟಿ ನಿರ್ಧಾರ ಮಾಡಿದ್ದೇನೆ.
ಕಳೆದ ಅಧಿವೇಶನದಲ್ಲಿ ಒಂದು ವಾರದಲ್ಲಿ ಸರ್ವಪಕ್ಷದ ಸಭೆ ಕರೆಯುವುದಾಗಿ ಬೊಮ್ಮಾಯಿ ಹೇಳಿದ್ದರು. ಕಳೆದ ರಾತ್ರಿನೂ ಸಿಎಂ ಸಭೆ ಮಾಡಿದ್ರು, ಸ್ಪೀಕರ್ ಕಚೇರಿಯಲ್ಲಿ ಕರೆದು ಸಭೆ ಮಾಡಿದ್ರು. ತಾರ್ಕಿಕ ಅಂತ್ಯ ಕೊಡ್ತೀವಿ ಅಂತ ಸಿಎಂ ಹೇಳಿದ್ದಾರೆ. ನಮ್ಮ ಸಮಾಜದ ಇಬ್ಬರು ಶಾಸಕರು ಬಿಟ್ರೆ, ಎಲ್ಲಾ ಸಮಾಜದ ಶಾಸಕರು ಇವತ್ತು ಸದನದಲ್ಲಿ ಬೆಂಬಲ ಕೊಟ್ಟಿದ್ದಾರೆ. ಮೀಸಲಾತಿ ಬಗ್ಗೆ ಚರ್ಚಿಸಲು ಅಧಿವೇಶದಲ್ಲಿ ಅವಕಾಶ ನೀಡ್ತೀವಿ ಅಂತಾ ಹೇಳಿದ್ದಾರೆ. ನಾನು ಆಶಾವಾದಿ ಇದ್ದೇನೆ, ಸರಕಾರ ಸೂಕ್ತ ನಿರ್ಣಯ ಮಾಡ್ತದೆ. ಇವತ್ತು ನಮ್ಮ ಪ್ರತಿಭಟನೆ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸಿದ್ದೇವೆ ಎಂದು ಬಸವನಗೌಡ ಪಾಟೀಲ್ ಯತ್ನಾಳ ಹೇಳಿದರು.
Haveri Basanagouda Patil Yatnal slams Yediyurappa over The Panchamasali Lingayats demanding inclusion in the OBC category.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm