www.40percentsarkara.com.
">ಬ್ರೇಕಿಂಗ್ ನ್ಯೂಸ್
21-09-22 04:33 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ರಾಜ್ಯ ಸರಕಾರದ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಸದನದಲ್ಲಿ ಹೋರಾಟ ನಡೆಸುತ್ತಿರುವಂತೆಯೇ ಕಾಂಗ್ರೆಸ್ ಬೆಂಗಳೂರು ನಗರದಲ್ಲಿ ನಲ್ವತ್ತು ಪರ್ಸೆಂಟ್ ಹೆಸರಲ್ಲಿ ಸಿಎಂ ಪೋಸ್ಟರ್ ಅಂಟಿಸಿ ಬಿಜೆಪಿಯನ್ನು ಅಣಕಿಸುವ ಕೆಲಸ ಮಾಡಿದೆ. ಬೆಂಗಳೂರು ನಗರದಾದ್ಯಂತ ಬಸ್ ನಿಲ್ದಾಣ, ಸಾರ್ವಜನಿಕ ಪ್ರದೇಶದಲ್ಲಿ ಪೇ ಸಿಎಂ ಹೆಸರಲ್ಲಿ ಬೊಮ್ಮಾಯಿ ಅವರ ನೆಗೆಟಿವ್ ಚಿತ್ರ ಬಳಸಿ ಪೋಸ್ಟರ್ ಚಿತ್ರಿಸಿದೆ.
ಪೇಟಿಎಂ ರೀತಿಯಲ್ಲೇ ಕ್ಯುಆರ್ ಕೋಡನ್ನು ಪೋಸ್ಟರಲ್ಲಿ ನೀಡಲಾಗಿದ್ದು, ಅದನ್ನು ಮೊಬೈಲಿನಲ್ಲಿ ಸ್ಕ್ಯಾನ್ ಮಾಡಿದರೆ ನೇರವಾಗಿ ಕಾಂಗ್ರೆಸ್ ವೆಬ್ ಸೈಟ್ ತೆರೆದುಕೊಳ್ಳುತ್ತದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ 40 ಪರ್ಸೆಂಟ್ ಕಮಿಷನ್ ಬಗ್ಗೆ ದೂರು ನೀಡಲು ವೆಬ್ ಸೈಟ್ ಆರಂಭಿಸಿತ್ತು. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ ಕಮಿಷನ್ ದಂಧೆ ಯಾವ ರೀತಿ ಇದೆ, ಅದರಿಂದ ಜನಸಾಮಾನ್ಯರು ಯಾವ ರೀತಿ ತೊಂದರೆ ಎದುರಿಸುತ್ತಿದ್ದಾರೆ ಎಂಬ ಬಗ್ಗೆ ದೂರು ನೀಡಲು ಈ ವೆಬ್ ಸೈಟ್ ಆರಂಭಿಸಿತ್ತು. ಆದರೆ ಆ ವೆಬ್ ಸೈಟ್ ಅಷ್ಟು ಪ್ರಚಾರ ಗಿಟ್ಟಿಸಿಕೊಂಡಿರಲಿಲ್ಲ.



ಇದೀಗ ಮುಖ್ಯಮಂತ್ರಿ ಬೊಮ್ಮಾಯಿ ಫೋಟೋ ಇರುವಂತೆ ಪೇಟಿಎಂ ಅಪ್ಲಿಕೇಶನ್ ಮಾದರಿಯಲ್ಲಿ ಕ್ಯುಆರ್ ಕೋಡ್ ಚಿತ್ರಿಸಿ ಪೋಸ್ಟರ್ ಮಾಡಲಾಗಿದ್ದು, ಅದನ್ನು ಸಾರ್ವಜನಿಕ ಜಾಗದಲ್ಲಿ ರಾತ್ರೋರಾತ್ರಿ ಅಂಟಿಸಲಾಗಿದೆ. ಬೆಂಗಳೂರು ನಗರದಾದ್ಯಂತ PAY CM ಎನ್ನುವ ಹೆಸರಿನ ಪೋಸ್ಟರನ್ನು ಬಸ್ ನಿಲ್ದಾಣ, ರಸ್ತೆ ಬದಿಯ ಗೋಡೆಗಳಲ್ಲಿ ಅಂಟಿಸಲಾಗಿದೆ. ಆಮೂಲಕ ನಲ್ವತ್ತು ಪರ್ಸೆಂಟ್ ಸರಕಾರ ಎನ್ನುವ ಬಗ್ಗೆ ಬಿಜೆಪಿ ಸರಕಾರವನ್ನು ತೀವ್ರವಾಗಿ ಅಣಕಿಸಲಾಗಿದೆ. ಈ ರೀತಿಯ ಪೋಸ್ಟರ್ ನಿಂದ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಮುಜುಗರಕ್ಕೊಳಗಾಗಿದ್ದಾರೆ.




ಕಳೆದ ವಾರ ಹೈದರಾಬಾದ್ ನಲ್ಲಿ ಇದೇ ರೀತಿ 40 ಪರ್ಸೆಂಟ್ ಸಿಎಂ ಎನ್ನುವ ದೊಡ್ಡ ಪೋಸ್ಟರನ್ನು ಹಾಕಲಾಗಿತ್ತು. ಅಲ್ಲಿ ಆಡಳಿತ ನಡೆಸುತ್ತಿರುವ ಟಿಆರ್ ಎಸ್ ಪಕ್ಷದ ಕಾರ್ಯಕರ್ತರು ಆ ರೀತಿ ಪೋಸ್ಟರ್ ಹಾಕಿದ್ದರು. ಹೈದರಾಬಾದಲ್ಲಿ ಬಿಜೆಪಿ ಕಾರ್ಯಕಾರಿಣಿ ಇದ್ದುದರಿಂದ ಮತ್ತು ಅದಕ್ಕೆ ಕರ್ನಾಟಕದ ಮುಖ್ಯಮಂತ್ರಿ ತೆರಳುತ್ತಾರೆ ಎಂಬ ಹಿನ್ನೆಲೆಯಲ್ಲಿ ಅಣಕಿಸುವ ಪೋಸ್ಟರ್ ಹಾಕಲಾಗಿತ್ತು. ಆದರೆ ಬಿಜೆಪಿ ಕಾರ್ಯಕಾರಿಣಿಯನ್ನು ಆನಂತರ ಮುಂದಕ್ಕೆ ಹಾಕಲಾಗಿತ್ತು.
Sharpening its attack on the Bommai government in Karnataka, the state Congress unit put up posters of the Chief Minister along with QR codes across Bengaluru on Wednesday. The ‘PayCM’ posters have an image of Chief Minister Basavraj Bommai and also a QR code attached on it, that will reportedly take users to www.40percentsarkara.com.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm