ಬ್ರೇಕಿಂಗ್ ನ್ಯೂಸ್
28-09-22 10:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28 : ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸೇರಿದ ಮನೆ, ಕಚೇರಿ ಮತ್ತು ಇತರ ಕಡೆಗಳಲ್ಲಿರುವ ಆಸ್ತಿಗಳಿಗೆ ಬುಧವಾರ ದಾಳಿ ನಡೆಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಡಿಕೆ ಶಿವಕುಮಾರ್ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.
ಕನಕಪುರ ತಹಶೀಲ್ದಾರ್ ವಿಶ್ವನಾಥ್ ಹಾಗೂ ಪೋಲೀಸರ ಜತೆಗೆ ತೆರಳಿದ್ದ ಕೇಂದ್ರ ತನಿಖಾ ದಳದ ಅಧಿಕಾರಿಗಳು, ಪರಿಶೀಲನೆ ವೇಳೆ ಕೆಲವು ದಾಖಲೆಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರ ಸಂಬಂಧಿಕರ ಆಸ್ತಿ ವಿವರಗಳ ಮಾಹಿತಿಯನ್ನು ಸಿಬಿಐ ಪಡೆದುಕೊಂಡಿದೆ. ತನಿಖಾ ತಂಡದ ಅಧಿಕಾರಿಗಳು ಸುಮಾರು ಒಂದು ಗಂಟೆಗೂ ಅಧಿಕ ಕಾಲ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸಿಬಿಐ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಬಿಐ ಅಧಿಕಾರಿಗಳು ತಹಶೀಲ್ದಾರ್ ಅವರನ್ನು ಜೊತೆಗೆ ಕರೆದುಕೊಂಡು ಬಂದು, ನಮ್ಮ ಊರಿನ ಆಸ್ತಿ ಪರಿಶೀಲನೆ ಮಾಡುತ್ತಿದ್ದಾರೆ. ಅವರು ಕೇಳಿದ ದಾಖಲೆ ನೀಡಿದ್ದೇನೆ. ನಮ್ಮ ತೋಟದ ಮನೆ, ಊರಿನ ಮನೆಗೆ ಬಂದು ಎಲ್ಲಾ ಆಸ್ತಿಗಳನ್ನು ನೋಡಿದ್ದಾರೆ ಅಂತ ಸಿಬ್ಬಂದಿ ತಿಳಿಸಿದ್ದಾರೆ. ಇಷ್ಟು ಮಾತ್ರ ನಂಗೆ ಗೊತ್ತು ಎಂದರು.
ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ದಾಳಿ ನಡೆಸಿರುವ ಕುರಿತು ಮಾತನಾಡಿದ ಅವರು, "ಏನು ಮಾಡೋಕೆ ಆಗುತ್ತೆ.. ಇದು ಹಣೆಬರಹ. ಇದು ಟಾರ್ಗೆಟ್ ಅಂತ ನಾನು ಹೇಳುವುದಿಲ್ಲ. ಅವರು ನನ್ನ ಪ್ರೀತಿ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
The CBI sleuths on Wednesday visited Karnataka Congress president D K Shivakumar's properties at his hometown in Ramanagara district and verified the documents related to them, his office said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm