ಬ್ರೇಕಿಂಗ್ ನ್ಯೂಸ್
28-09-22 11:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28 : ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮರು ಪರೀಕ್ಷೆ ನಡೆಸುವುದನ್ನು ರದ್ದು ಮಾಡುವಂತೆ ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಜಿ. ನರೇಂದ್ರ ಅವರಿದ್ದ ವಿಭಾಗೀಯ ನ್ಯಾಯಪೀಠ, ಮರುಪರೀಕ್ಷೆ ನಿರ್ಧಾರಕ್ಕೆ ತಡೆ ನೀಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಪಿ.ಎಸ್. ರಾಜಗೋಪಾಲ್, ಎ.ಎಸ್. ಪೊನ್ನಣ್ಣ, ಡಿ.ಆರ್.ರವಿಶಂಕರ್ ಅವರು, ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು 32 ಮಂದಿ ಕಳಂಕಿತರು ಎಂದು ಗುರುತಿಸಿ ಅವರ ವಿರುದ್ಧ ಆರೋಪ ಪಟ್ಟಿಯನ್ನೂ ದಾಖಲಿಸಲಾಗಿದೆ. ಹಾಗಾಗಿ ಕಳಂಕಿತರನ್ನು ಮತ್ತು ಕಳಂಕಿತರಲ್ಲದವರನ್ನು ಪ್ರತ್ಯೇಕಿಸಲು ಅವಕಾಶವಿರುವುದರಿಂದ ಮರು ಪರೀಕ್ಷೆ ನಡೆಸುವ ಅಗತ್ಯ ಇಲ್ಲ ಎಂದರು.
ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್.ಸುಬ್ರಹ್ಮಣ್ಯ ಅವರು, ಪ್ರಕರಣ ವ್ಯಾಪಕವಾಗಿ ಹರಡಿದ್ದು, ಹಲವು ಅಧಿಕಾರಿಗಳು, ಅಭ್ಯರ್ಥಿಗಳು, ಮಧ್ಯವರ್ತಿಗಳು ಭಾಗಿಯಾಗಿದ್ದಾರೆ.
ಪರೀಕ್ಷೆಯಲ್ಲೇ ಅಕ್ರಮವಾಗಿರುವುದರಿಂದ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮರುಪರೀಕ್ಷೆ ನಡೆಸಲು ನಿರ್ಧರಿಸಿದೆ. ನೇಮಕಾತಿ ಪ್ರಾಧಿಕಾರದ ವಿರುದ್ಧವೇ ಅಕ್ರಮವೆಸಗಿರುವ ಆರೋಪವಿರುವ ಹಿನ್ನೆಲೆಯಲ್ಲಿ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆಯ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
Psi scam in Karnataka, high court brings stay order on re examination of PSI exams in state.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm