ಬ್ರೇಕಿಂಗ್ ನ್ಯೂಸ್
28-09-22 11:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28 : ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮರು ಪರೀಕ್ಷೆ ನಡೆಸುವುದನ್ನು ರದ್ದು ಮಾಡುವಂತೆ ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಜಿ. ನರೇಂದ್ರ ಅವರಿದ್ದ ವಿಭಾಗೀಯ ನ್ಯಾಯಪೀಠ, ಮರುಪರೀಕ್ಷೆ ನಿರ್ಧಾರಕ್ಕೆ ತಡೆ ನೀಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಪಿ.ಎಸ್. ರಾಜಗೋಪಾಲ್, ಎ.ಎಸ್. ಪೊನ್ನಣ್ಣ, ಡಿ.ಆರ್.ರವಿಶಂಕರ್ ಅವರು, ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು 32 ಮಂದಿ ಕಳಂಕಿತರು ಎಂದು ಗುರುತಿಸಿ ಅವರ ವಿರುದ್ಧ ಆರೋಪ ಪಟ್ಟಿಯನ್ನೂ ದಾಖಲಿಸಲಾಗಿದೆ. ಹಾಗಾಗಿ ಕಳಂಕಿತರನ್ನು ಮತ್ತು ಕಳಂಕಿತರಲ್ಲದವರನ್ನು ಪ್ರತ್ಯೇಕಿಸಲು ಅವಕಾಶವಿರುವುದರಿಂದ ಮರು ಪರೀಕ್ಷೆ ನಡೆಸುವ ಅಗತ್ಯ ಇಲ್ಲ ಎಂದರು.
ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್.ಸುಬ್ರಹ್ಮಣ್ಯ ಅವರು, ಪ್ರಕರಣ ವ್ಯಾಪಕವಾಗಿ ಹರಡಿದ್ದು, ಹಲವು ಅಧಿಕಾರಿಗಳು, ಅಭ್ಯರ್ಥಿಗಳು, ಮಧ್ಯವರ್ತಿಗಳು ಭಾಗಿಯಾಗಿದ್ದಾರೆ.
ಪರೀಕ್ಷೆಯಲ್ಲೇ ಅಕ್ರಮವಾಗಿರುವುದರಿಂದ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮರುಪರೀಕ್ಷೆ ನಡೆಸಲು ನಿರ್ಧರಿಸಿದೆ. ನೇಮಕಾತಿ ಪ್ರಾಧಿಕಾರದ ವಿರುದ್ಧವೇ ಅಕ್ರಮವೆಸಗಿರುವ ಆರೋಪವಿರುವ ಹಿನ್ನೆಲೆಯಲ್ಲಿ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆಯ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
Psi scam in Karnataka, high court brings stay order on re examination of PSI exams in state.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm